ಸೋನಿಯಾ ಗಾಂಧಿ, ಮಮತಾ ಬ್ಯಾನರ್ಜಿ 
ದೇಶ

ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ನಾಳೆ ದೆಹಲಿಯಲ್ಲಿ ಕರೆದಿರುವ ಸಭೆಯಲ್ಲಿ ಕಾಂಗ್ರೆಸ್ ಭಾಗಿ

ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ತಂತ್ರಗಾರಿಕೆ ಕುರಿತು ಚರ್ಚಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ದೆಹಲಿಯಲ್ಲಿ ಕರೆದಿರುವ...

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ತಂತ್ರಗಾರಿಕೆ ಕುರಿತು ಚರ್ಚಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ದೆಹಲಿಯಲ್ಲಿ ಕರೆದಿರುವ ಪ್ರತಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ.

ತೃಣಮೂಲ ಕಾಂಗ್ರೆಸ್ ನಾಯಕರು ಕರೆದಿರುವ ಸಭೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಕಾಂಗ್ರೆಸ್ ಪ್ರತಿನಿಧಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇಲ್ಲಿಯವರೆಗೆ ಒಮ್ಮತದ ಸಾಧ್ಯತೆಯಂತೆ, ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಶರದ್ ಪವಾರ್ ಅವರು ನಿರೀಕ್ಷಿತ ಅಭ್ಯರ್ಥಿಗಳಲ್ಲಿ ಒಬ್ಬರು ಎಂಬ ಸುಳಿವು ಇತ್ತು. ಆದರೆ ಪವಾರ್ ಅವರು ರಾಷ್ಟ್ರಪತಿ ಚುನಾವಣೆಯ ರೇಸ್ ನಲ್ಲಿ ಇಲ್ಲ ಎಂದು ಅವರ ಪಕ್ಷ ಎನ್ ಸಿಪಿ ಹೇಳಿದೆ. ಶರದ್ ಪವಾರ್ ಬುಧವಾರದ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಮಮತಾ ಬ್ಯಾನರ್ಜಿ ಅವರು ಶನಿವಾರ ಪ್ರತಿಪಕ್ಷ ನಾಯಕರಿಗೆ ಪತ್ರ ಬರೆದು ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದರು.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳುತ್ತದೆ. ಭಾರತದ ಮುಂದಿನ ರಾಷ್ಟ್ರಪತಿಗಾಗಿ ಜುಲೈ 18 ರಂದು ಚುನಾವಣೆ ನಡೆಯಲಿದೆ ಮತ್ತು ಅಗತ್ಯವಿದ್ದರೆ ಮೂರು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟಕ್ಕೆ ಖಚಿತ ಗೆಲುವಿನ ಸಂಖ್ಯೆ ಇಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಕೇರಳಿಗರದ್ದು ಇದೆಂಥ ಮನಸ್ಥಿತಿ: ನಟಿ ಮಾಳವಿಕಾಗೆ ಗೋಮಾಂಸ ಇಷ್ಟನಾ? ತಿಂತೀರಾ ಅಂತ ಕೇಳಿದ ಪತ್ರಕರ್ತ; ನೆಟ್ಟಿಗರ ಆಕ್ರೋಶ, Video!

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!