ಪ್ರತಿಭಟನಾಕಾರರು 
ದೇಶ

ಪ್ರವಾದಿ ಕುರಿತ ಹೇಳಿಕೆ ವಿವಾದ: ಉತ್ತರ ಪ್ರದೇಶದಲ್ಲಿನ ಹಿಂಸಾಚಾರಕ್ಕಾಗಿ 337 ಪ್ರತಿಭಟನಾಕಾರರ ಬಂಧನ

ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜೂನ್ 10 ರಂದು ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಎಂಟು ಜಿಲ್ಲೆಗಳಿಂದ ಇಲ್ಲಿಯವರೆಗೂ ಸುಮಾರು 337 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. 

ಲಖನೌ: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜೂನ್ 10 ರಂದು ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಎಂಟು ಜಿಲ್ಲೆಗಳಿಂದ ಇಲ್ಲಿಯವರೆಗೂ ಸುಮಾರು 337 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜಿಲ್ಲೆಗಳಲ್ಲಿ 13 ಎಫ್ ಐಆರ್ ಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಹೇಳಿದ್ದಾರೆ.  ಈ 337 ಜನರ ಪೈಕಿ ಪ್ರಯಾಗ್ ರಾಜ್ ನಿಂದ 92, ಶಹರನ್ ಪುರದಿಂದ 83, ಹರ್ತಾಸ್ ನಿಂದ 52, ಅಂಬೇಡ್ಕರ್ ನಗರದಿಂದ 41, ಮೊರಾದಾಬಾದ್ ನಿಂದ 40, ಫಿರೋಜ್ ಬಾದ್ ನಿಂದ 18, ಅಲಿಘಡದಿಂದ ಆರು, ಜಲೌನ್ ನಿಂದ ಐವರು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ದಾಖಲಾಗಿರುವ 13 ಕೇಸ್ ಗಳ ಪೈಕಿ ಪ್ರಯಾಗ್ ರಾಜ್ ಮತ್ತು ಶಹರನ್ ಪುರದಿಂದ ಮೂರು, ಫಿರೋಜಾಬಾದ್, ಅಂಬೇಡ್ಕರ್ ನಗರ, ಮೊರಾದಾಬಾದ್, ಹರ್ತಾಸ್, ಅಲಿಘಡ. ಲಖೀಂಪುರ್ ಕೇರಿ ಮತ್ತು ಜಲೌನ್ ನಿಂದ ತಲಾ ಒಂದೊಂದು ಕೇಸ್ ದಾಖಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ಜೂನ್ 10 ರಂದು ಶುಕ್ರವಾರ ಪ್ರಾರ್ಥನೆ ಸಲ್ಲಿಸಿದ ನಂತರ ಪ್ರಯಾಗ್ ರಾಜ್ ಹಾಗೂ ಶಹರನ್ ಪುರದಲ್ಲಿ ಸಂಭವಿಸಿದ ಹಿಂಸಾಚಾರದ ವೇಳೆಯಲ್ಲಿ ಉದ್ರಿಕ್ತ ಗುಂಪು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT