ದೆಹಲಿಯಲ್ಲಿ ಬಿಗಿ ಭದ್ರತೆ 
ದೇಶ

ನ್ಯಾಷನಲ್ ಹೆರಾಲ್ಡ್ ಕೇಸ್: ಇಂದೂ ಕೂಡ ಇಡಿಯಿಂದ ರಾಹುಲ್ ಗಾಂಧಿ ವಿಚಾರಣೆ, ಎಲ್ಲೆಡೆ ಬಿಗಿ ಭದ್ರತೆ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಒಂದೆಡೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಮತ್ತೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೈಡ್ರಾಮಾ ಶುರುವಾಗಿತ್ತು.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಒಂದೆಡೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಮತ್ತೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೈಡ್ರಾಮಾ ಶುರುವಾಗಿತ್ತು.

ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ಸಿಗರು ದೇಶದ ಹಲವಡೆ ಪ್ರತಿಭಟನೆ ನಡೆಸಿದ್ದರು.

ಇಡಿ ನೋಟಿಸ್ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 11.10ರ ಸುಮಾರಿಗೆ ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿಯವರು ವಿಚಾರಣೆಗೆ ಹಾಜರಾದರು. ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿಯವರು ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು (ಮಂಗಳವಾರ) ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಇಡಿ ವಿಚಾರಣೆಯ ಮೊದಲ ದಿನವೇ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇಂದು ಯಾವುದೇ ರೀತಿಯ ಅಹಿತಕರ ವಾತಾವರಣ ಸೃಷ್ಟಿಯಾಗದಂತೆ ದೆಹಲಿ ಪೊಲೀಸರು ಎಲ್ಲೆಡೆ ಬಿಗಿ ಭದ್ರತೆ ನೀಡಿದ್ದಾರೆ.

ದೆಹಲಿಯ ಅಕ್ಬಾರ್ ರಸ್ತೆಯಲ್ಲಿ ಬ್ಯಾರಿಕೇಡ್ ಗಳ ಹಾಕಿ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ. ಅಲ್ಲದೆ, ಈ ಸ್ಥಳದಲ್ಲಿ ಸೆಕ್ಷನ್ 144 ಮುಂದುವರೆದಿದೆ ಎಂದು ತಿಳಿದುಬಂದಿದೆ.

ರಾಹುಲ್ ಬಂಧನ ಸಾಧ್ಯತೆ?
ಈ ನಡುವೆ ಇಡಿ ಇಂದೂ ಕೂಡ ರಾಹುಲ್ ಗಾಂಧಿಯವರನ್ನು ವಿಚಾರಣೆಗೊಳಪಡಿಸಿದ್ದು, ವಿಚಾರಣೆ ಪೂರ್ಣಗೊಂಡ ಬಳಿಕ ರಾಹುಲ್ ಗಾಂಧಿಯವರನ್ನು ಬಂಧನಕ್ಕೊಳಪಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT