ದೆಹಲಿಯಲ್ಲಿ ಬಿಗಿ ಭದ್ರತೆ 
ದೇಶ

ನ್ಯಾಷನಲ್ ಹೆರಾಲ್ಡ್ ಕೇಸ್: ಇಂದೂ ಕೂಡ ಇಡಿಯಿಂದ ರಾಹುಲ್ ಗಾಂಧಿ ವಿಚಾರಣೆ, ಎಲ್ಲೆಡೆ ಬಿಗಿ ಭದ್ರತೆ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಒಂದೆಡೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಮತ್ತೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೈಡ್ರಾಮಾ ಶುರುವಾಗಿತ್ತು.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಒಂದೆಡೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಮತ್ತೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೈಡ್ರಾಮಾ ಶುರುವಾಗಿತ್ತು.

ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ಸಿಗರು ದೇಶದ ಹಲವಡೆ ಪ್ರತಿಭಟನೆ ನಡೆಸಿದ್ದರು.

ಇಡಿ ನೋಟಿಸ್ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 11.10ರ ಸುಮಾರಿಗೆ ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿಯವರು ವಿಚಾರಣೆಗೆ ಹಾಜರಾದರು. ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿಯವರು ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು (ಮಂಗಳವಾರ) ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಇಡಿ ವಿಚಾರಣೆಯ ಮೊದಲ ದಿನವೇ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇಂದು ಯಾವುದೇ ರೀತಿಯ ಅಹಿತಕರ ವಾತಾವರಣ ಸೃಷ್ಟಿಯಾಗದಂತೆ ದೆಹಲಿ ಪೊಲೀಸರು ಎಲ್ಲೆಡೆ ಬಿಗಿ ಭದ್ರತೆ ನೀಡಿದ್ದಾರೆ.

ದೆಹಲಿಯ ಅಕ್ಬಾರ್ ರಸ್ತೆಯಲ್ಲಿ ಬ್ಯಾರಿಕೇಡ್ ಗಳ ಹಾಕಿ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ. ಅಲ್ಲದೆ, ಈ ಸ್ಥಳದಲ್ಲಿ ಸೆಕ್ಷನ್ 144 ಮುಂದುವರೆದಿದೆ ಎಂದು ತಿಳಿದುಬಂದಿದೆ.

ರಾಹುಲ್ ಬಂಧನ ಸಾಧ್ಯತೆ?
ಈ ನಡುವೆ ಇಡಿ ಇಂದೂ ಕೂಡ ರಾಹುಲ್ ಗಾಂಧಿಯವರನ್ನು ವಿಚಾರಣೆಗೊಳಪಡಿಸಿದ್ದು, ವಿಚಾರಣೆ ಪೂರ್ಣಗೊಂಡ ಬಳಿಕ ರಾಹುಲ್ ಗಾಂಧಿಯವರನ್ನು ಬಂಧನಕ್ಕೊಳಪಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!