ಸಂಗ್ರಹ ಚಿತ್ರ 
ದೇಶ

ಶ್ರೀನಗರದಲ್ಲಿ ಎನ್ಕೌಂಟರ್: ಅಮರನಾಥ ಯಾತ್ರೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಒಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಕಣಿವೆ ನಾಡಿನಲ್ಲಿ ನಾಗರಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿರುವ ಬೆನ್ನಲ್ಲೇ ಭಯೋತ್ಪಾದಕರ ನಿಗ್ರಹಕ್ಕೆ ಶೋಧ ಕಾರ್ಯಾಚರಣೆ ಹೆಚ್ಚಿಸಲಾಗಿದೆ.

ಜೂನ್‌ 30ರಿಂದ ಆರಂಭವಾಗಲಿರುವ ಅಮರನಾಥ ಯಾತ್ರೆಯನ್ನು ಗುರಿಯಾಗಿಸಿ ದಾಳಿ ನಡೆಸಲು ಈ ಉಗ್ರರು ಸಂಚು ರೂಪಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಮರನಾಥ ಯಾತ್ರೆಯ ಮೇಲೆ ದಾಳಿ ನಡೆಸಲು ಮೂವರು ಉಗ್ರರು ಯೋಜನೆ ರೂಪಿಸಿದ್ದರು. ಪಾಕಿಸ್ತಾನದ ಇಬ್ಬರು ಉಗ್ರರು ಹಾಗೂ ಒಬ್ಬ ಸ್ಥಳೀಯ ಉಗ್ರ ಸೇರಿ ರೂಪಿಸಿದ್ದ ಯೋಜನೆಯನ್ನು ವಿಫಲಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT