ಬಲವಂತದಿಂದ ಮದುವೆ 
ದೇಶ

ಬಿಹಾರ: ಪ್ರಾಣಿ ತಪಾಸಣೆಗೆಂದು ಪಶುವೈದ್ಯನ ಅಪಹರಿಸಿ ಬಲವಂತದಿಂದ ಮದುವೆ ಮಾಡಿದ್ರು!

ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಾಣಿಯ ತಪಾಸಣೆಗೆಂದು ಪಶುವೈದ್ಯರನ್ನು ಕರೆಸಿಕೊಂಡ ಮೂವರು, ವೈದ್ಯರನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿರುವ ಘಟನೆ ಬಿಹಾರದ ಬೇಗುಸರಾಯ್‌ನಲ್ಲಿ ಮಂಗಳವಾರ ನಡೆದಿದೆ.

ಪಾಟ್ನಾ: ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಾಣಿಯ ತಪಾಸಣೆಗೆಂದು ಪಶುವೈದ್ಯರನ್ನು ಕರೆಸಿಕೊಂಡ ಮೂವರು, ವೈದ್ಯರನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿರುವ ಘಟನೆ ಬಿಹಾರದ ಬೇಗುಸರಾಯ್‌ನಲ್ಲಿ ಮಂಗಳವಾರ ನಡೆದಿದೆ.

ಅಸ್ವಸ್ಥ ಪ್ರಾಣಿಯನ್ನು ಪರೀಕ್ಷಿಸಲು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ವೈದ್ಯರನ್ನು ಕರೆಸಿಕೊಳ್ಳಲಾಯಿತು. ನಂತರ ಮೂವರು ಅವರನ್ನು ಅಪಹರಿಸಿದರು. ಮನೆಯಲ್ಲಿ ಎಲ್ಲರೂ ಚಿಂತಿತರಾಗಿ ನಂತರ ನಾವು ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಸಂತ್ರಸ್ತ ಪಶುವೈದ್ಯರ ಕುಟುಂಬಸ್ಥರು ತಿಳಿಸಿದ್ದಾರೆ.

ಪಶುವೈದ್ಯರ ತಂದೆ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ನಾವು ಎಸ್‌ಎಚ್‌ಒ ಮತ್ತು ಇತರ ಅಧಿಕಾರಿಗಳನ್ನು ಕೇಳಿದ್ದೇವೆ. ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಬೇಗುಸರಾಯ್ ಎಸ್‌ಪಿ ಯೋಗೇಂದ್ರ ಕುಮಾರ್ ಹೇಳಿದ್ದಾರೆ.

ವರನ ಅಪಹರಣ ಅಥವಾ ‘ಪಕದ್ವಾ ವಿವಾಹ’ ಎಂಬುದು ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದ ಭಾಗಗಳಲ್ಲಿ ಸಾಕಷ್ಟು ಸಾಮಾನ್ಯವಾದ ವಿದ್ಯಮಾನವಾಗಿದೆ. ಇದರಲ್ಲಿ ಬ್ರಹ್ಮಚಾರಿಗಳಿಗೆ ಬಂದೂಕು ಹಿಡಿದು ಬೆದರಿಸಿದಾಗ ಅವರು ಬಲವಂತವಾಗಿ ಮದುವೆಯಾಗುತ್ತಾರೆ. ಹೆಚ್ಚಿನ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯನ್ನು ಹೊಂದಿರುವ ಬ್ಯಾಚುಲರ್ ಗಳನ್ನ ಅಪಹರಿಸಿ ವಧುವಿನ ಕುಟುಂಬದವರು ಬಲವಂತವಾಗಿ ಮದುವೆ ಮಾಡುವ ಘಟನೆಗಳು ಆಗಾಗ ವರದಿಯಾಗುತ್ತವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!