ರಾಷ್ಟ್ರಪತಿ ಭವನ, ಒಳಚಿತ್ರದಲ್ಲಿ ಮಮತಾ ಬ್ಯಾನರ್ಜಿ 
ದೇಶ

ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಇಂದು ಅಪರಾಹ್ನ ಸಭೆ; ಹೆಚ್ ಡಿಡಿ, ಹೆಚ್ ಡಿಕೆ ಭಾಗಿ

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ (Presidential poll) ಕಣ ರಂಗೇರುತ್ತಿದೆ. ರಾಮನಾಥ್ ಕೋವಿಂದ್ (Ramanath Kovind) ಅವರ ಅಧಿಕಾರವಧಿ ಜುಲೈ 24ಕ್ಕೆ ಮುಗಿಯುತ್ತಿದ್ದು ಅವರ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಕುತೂಹಲ ಮನೆಮಾಡಿದೆ. 

ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ (Presidential poll) ಕಣ ರಂಗೇರುತ್ತಿದೆ. ರಾಮನಾಥ್ ಕೋವಿಂದ್ (Ramanath Kovind) ಅವರ ಅಧಿಕಾರವಧಿ ಜುಲೈ 24ಕ್ಕೆ ಮುಗಿಯುತ್ತಿದ್ದು ಅವರ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಕುತೂಹಲ ಮನೆಮಾಡಿದೆ. 

ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳಿಂದ ಯಾವ ಅಭ್ಯರ್ಥಿಯನ್ನು ರಾಷ್ಟ್ರಪತಿ ಕಣಕ್ಕೆ ನಿಲ್ಲಿಸುತ್ತಾರೆ, ಪ್ರಾದೇಶಿಕ ಪಕ್ಷಗಳೆಲ್ಲ ಒಂದಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆಯೇ ಎಂಬ ಚರ್ಚೆ ದಟ್ಟವಾಗಿದೆ. ಇಂದು ಅಪರಾಹ್ನ 3 ಗಂಟೆಗೆ ದೆಹಲಿಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷಗಳ ಮುಖ್ಯಸ್ಥರ ಸಭೆ ನಡೆಯಲಿದ್ದು 22 ವಿರೋಧ ಪಕ್ಷಗಳನ್ನು ಅವರು ಸಭೆಗೆ ಕರೆದಿದ್ದಾರೆ.ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ನಲ್ಲಿ ಸಭೆ ನಡೆಯಲಿದ್ದು, ಎಲ್ಲರ ಚಿತ್ತ ದೆಹಲಿಯತ್ತ ಮನೆಮಾಡಿದೆ.

ಸಭೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ ಪ್ರಾದೇಶಿಕ ಪಕ್ಷ ಜೆಡಿಎಸ್ ನ ನಾಯಕರಾದ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ಈಗಾಗಲೇ ದೆಹಲಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ತೆರಳಿದ್ದಾರೆ.

ಸಹಮತದ ವಿರೋಧ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮನವೊಲಿಸಲು ಮಮತಾ ಬ್ಯಾನರ್ಜಿಯವರು ಈಗಾಗಲೇ ಎನ್ ಸಿಪಿ ನಾಯಕ ಶರದ್ ಪವಾರ್(Sharad Pawar) ಅವರನ್ನು ನಿನ್ನೆ ಭೇಟಿ ಮಾಡಿದ್ದರು. ಬಲಿಷ್ಠ ಮರಾಠ ರಾಜಕೀಯ ಮುಖಂಡನಾಗಿರುವ ಶರದ್ ಪವಾರ್ ಅವರಿಗೆ ಹಲವು ರಾಜಕೀಯ ಪಕ್ಷಗಳ ನಾಯಕರ ಜೊತೆ ನಿಕಟ ಸಂಪರ್ಕವಿದೆ. ಆದರೆ ಅವರು ಮಮತಾ ಬ್ಯಾನರ್ಜಿಯವರ ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಕಾಂಗ್ರೆಸ್, ಎಡಪಕ್ಷಗಳು ಕೂಡ ಮಮತಾ ಸಭೆಗೆ ಗೈರಾಗಲಿದ್ದಾರೆ. ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮತ್ತು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರು ಉನ್ನತ ನಾಯಕತ್ವ ಸಭೆಗೆ ಹಾಜರಾಗುವುದಿಲ್ಲ ಎಂದು ಹೇಳಿದ್ದಾರೆ. ಸಭೆಯಲ್ಲಿ ಸಿಪಿಐ(ಎಂ) ಪಕ್ಷವನ್ನು ನಾಯಕ ಇ ಕರೀಂ ಪ್ರತಿನಿಧಿಸಲಿದ್ದಾರೆ.

ತಮ್ಮ ಪಕ್ಷದ ಸಂಸದರನ್ನು ಸಭೆಗೆ ಕರೆಯುವ ಮೊದಲು, ಯೆಚೂರಿ ಅವರು ಬ್ಯಾನರ್ಜಿಗೆ ಪತ್ರ ಬರೆದು ಸಭೆಯನ್ನು ಆಯೋಜಿಸುವ ನಿರ್ಧಾರವನ್ನು ಇದು ತಮ್ಮ ಏಕಪಕ್ಷೀಯ ನಿರ್ಧಾರ ಎಂದು ಕರೆದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸಭೆಗೆ ಡಿಎಂಕೆಯ ಟಿಆರ್ ಬಾಲು, ಶಿವಸೇನೆಯ ಸುಭಾಷ್ ದೇಸಾಯಿ, ಆರ್‌ಎಲ್‌ಡಿಯ ಜಯಂತ್ ಚೌಧರಿ ಮತ್ತು ಮೆಹಬೂಬಾ ಮುಫ್ತಿ ಅವರು ಭಾಗವಹಿಸಲಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥ ಮತ್ತು ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾಗವಹಿಸಲಿದ್ದಾರೆ.

ಕಳೆದ ವರ್ಷದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬೃಹತ್ ವಿಜಯ ಸಾಧಿಸಿದ ನಂತರ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಿ ಮುನ್ನಲೆಗೆ ಬರಲು ಮಮತಾ ಬ್ಯಾನರ್ಜಿ ತೀವ್ರ ಉತ್ಸುಕವಾಗಿದ್ದಾರೆ. ಕೇಂದ್ರದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಪ್ರಬಲ ವಿರೋಧ ಪಕ್ಷ ತಯಾರು ಮಾಡಬೇಕೆಂಬುದು ಅವರ ಉದ್ದೇಶವಾಗಿದ್ದು ಇದಕ್ಕೆ ಪ್ರಾದೇಶಿಕ ಪಕ್ಷಗಳು ಒಗ್ಗೂಡುವಂತೆ ಮನವಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಗೆ ಸಹ ಆಹ್ವಾನ ನೀಡಿದ್ದು ಈ ಹಿಂದೆ ಸುದ್ದಿಯಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ: ವಿಡಿಯೋ ಬಿಡುಗಡೆ ಮಾಡಿದ ರಷ್ಯಾ, ಝೆಲೆನ್ಸ್ಕಿ ಇನ್ನು ಬಂಕರ್‌ನಲ್ಲೇ ಎಂದು ಶಪಥ..!

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: ಹಲವರಿಗೆ ಮುಂಬಡ್ತಿ, ಕೆಲವರಿಗೆ ವರ್ಗಾವಣೆ

ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಿ ಜೊಹ್ರಾನ್ ಮಮ್ದಾನಿ ಪ್ರಮಾಣ ವಚನ: ಕುರಾನ್ ಮೇಲೆ ಕೈ ಇಟ್ಟು ಅಧಿಕಾರ ಸ್ವೀಕಾರ

ಆದ್ಯತೆಯ ಪಟ್ಟಿಯಲ್ಲಿ ವಿಮೆಗೆ ಹೆಚ್ಚಿನ ಮಹತ್ವವಿರಲಿ! (ಹಣಕ್ಲಾಸು)

New Year 2026: ಕಳೆದ ವರ್ಷದ ಸಾಧನೆಗಳ ಸ್ಪೂರ್ತಿಯೊಂದಿಗೆ ನೂತನ ವರ್ಷವ ಸ್ವಾಗತಿಸೋಣ; ಜನತೆಗೆ ಶುಭಾಶಯ ಕೋರಿದ CM-DCM

SCROLL FOR NEXT