ಅಧೀರ್ ರಂಜನ್ ಚೌಧರಿ ಮತ್ತಿತರರು 
ದೇಶ

ನವದೆಹಲಿ: ಪೊಲೀಸರಿಂದ ದೌರ್ಜನ್ಯ, ಕಾಂಗ್ರೆಸ್ ಮುಖಂಡರಿಂದ ಸ್ಪೀಕರ್ ಗೆ ದೂರು

ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ವಿರೋಧಿಸಿ ಪ್ರತಿಭಟನಾನಿರತ ಕಾಂಗ್ರೆಸ್ ಪಕ್ಷದ ಕೆಲ  ಸಂಸದರ ಮೇಲೆ ದೆಹಲಿ ಪೊಲೀಸರ ದೌರ್ಜನ್ಯ ಕುರಿತಂತೆ ಪಕ್ಷದ ಕಚೇರಿಯಲ್ಲಿಂದು ಸಭೆ ನಡೆಯಿತು. 

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ವಿರೋಧಿಸಿ ಪ್ರತಿಭಟನಾನಿರತ ಕಾಂಗ್ರೆಸ್ ಪಕ್ಷದ ಕೆಲ  ಸಂಸದರ ಮೇಲೆ ದೆಹಲಿ ಪೊಲೀಸರ ದೌರ್ಜನ್ಯ ಕುರಿತಂತೆ ಪಕ್ಷದ ಕಚೇರಿಯಲ್ಲಿಂದು ಸಭೆ ನಡೆಯಿತು. 

ನಂತರ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ನೇತೃತ್ವದಲ್ಲಿನ ನಿಯೋಗ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಧಿರ್ ರಂಜನ್ ಚೌಧರಿ, ಪೊಲೀಸರಿಂದ ಆಗುತ್ತಿರುವ ದೌರ್ಜನ್ಯ ಹಾಗೂ ಹಿಂಸಾಚಾರದ ಬಗ್ಗೆ ವಿವರವಾಗಿ ಸ್ಪೀಕರ್ ಗೆ ತಿಳಿಸಿದ್ದೇವೆ ಎಂದರು.

ಕಾಂಗ್ರೆಸ್ ಸಂಸದರು ಮತ್ತು ಕಾರ್ಯಕರ್ತರ ಮೇಲೆ ಪೂರ್ವ ಯೋಜಿತ ಸಂಚಿನಂತೆ ಹಲ್ಲೆ ಮಾಡುತ್ತಿರುವ ದೆಹಲಿ ಪೊಲೀಸರ ವರ್ತನೆ ಬಗ್ಗೆ ಸ್ಪೀಕರ್ ಅವರೊಂದಿಗೆ ಮಾತನಾಡಿರುವುದಾಗಿ ಅವರು ಹೇಳಿದರು. 

ಪೊಲೀಸ್ ಠಾಣೆಗಳಲ್ಲಿಯೂ ದೆಹಲಿ ಪೊಲೀಸರು, ಕಾಂಗ್ರೆಸ್ ಸಂಸದರು ಹಾಗೂ ಕಾರ್ಯಕರ್ತರನ್ನು ಉಗ್ರರಂತೆ ಕಾಣುತ್ತಿದ್ದಾರೆ. ರಾಹುಲ್ ಗಾಂಧಿ ವಿಚಾರಣೆಗೆ ನಾವು ಆಕ್ಷೇಪ ವ್ಯಕ್ತಪಡಿಸುತ್ತಿಲ್ಲ, ಸೇಡಿನ ಮತ್ತು ಹಿಂಸಾತ್ಮಕ ರಾಜಕೀಯವನ್ನು ಬಳಸಬೇಡಿ ಎಂದು ನಾವು ಹೇಳಲು ಬಯಸುತ್ತೇವೆ ಎಂದು ಚೌಧರಿ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT