ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಭಾರೀ ಏರಿಕೆ: ದೇಶದಲ್ಲಿಂದು 12,213 ಹೊಸ ಕೇಸ್ ಪತ್ತೆ, 11 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 12,213 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 12,213 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,57,730ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,803ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 58,215ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 7,624 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ  4,26,7,471ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,40,278 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,58,71,030 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,95,67,37,014 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT