ತಾಯಿ ಹೀರಾಬೆನ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ 
ದೇಶ

ಜೂನ್ 18ಕ್ಕೆ 100ನೇ ವರ್ಷಕ್ಕೆ ಕಾಲಿಡುತ್ತಿರುವ ಪ್ರಧಾನಿ ಮೋದಿ ತಾಯಿ ಹೀರಾಬೆನ್: ಗಾಂಧಿನಗರ ರಸ್ತೆಯೊಂದಕ್ಕೆ ಹೆಸರು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಇದೇ ಜೂನ್ 18ಕ್ಕೆ 100ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಈ ಮೂಲಕ ಶತಾಯುಷಿ ಎನಿಸಿಕೊಳ್ಳಲಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಗುಜರಾತ್ ರಾಜಧಾನಿ ಗಾಂಧಿನಗರದಲ್ಲಿ ರಸ್ತೆಯೊಂದಕ್ಕೆ ಹೀರಾಬೆನ್ ಹೆಸರನ್ನಿಡಲಾಗಿದೆ.

ಅಹಮದಾಬಾದ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಇದೇ ಜೂನ್ 18ಕ್ಕೆ 100ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಈ ಮೂಲಕ ಶತಾಯುಷಿ ಎನಿಸಿಕೊಳ್ಳಲಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಗುಜರಾತ್ ರಾಜಧಾನಿ ಗಾಂಧಿನಗರದಲ್ಲಿ ರಸ್ತೆಯೊಂದಕ್ಕೆ ಹೀರಾಬೆನ್ ಹೆಸರನ್ನಿಡಲಾಗಿದೆ.

ಹೀರಾಬೆನ್ ತನ್ನ 100 ನೇ ವರ್ಷಕ್ಕೆ ಕಾಲಿಡುತ್ತಿರುವಾಗ, ನಾವು ಮುಂದಿನ ಪೀಳಿಗೆಗೆ ಅವರ ಜೀವನದಿಂದ ಸ್ಫೂರ್ತಿ ಪಡೆಯಲು ರೈಸನ್ ಪ್ರದೇಶದ 80 ಮೀಟರ್ ರಸ್ತೆಗೆ ಹೀರಾ ಮಾರ್ಗ ಎಂದು ಹೆಸರಿಸಲು ನಿರ್ಧರಿಸಿದ್ದೇವೆ ಎಂದು ಗಾಂಧಿನಗರ ಮೇಯರ್ ಹಿತೇಶ್ ಮಕ್ವಾನಾ ತಿಳಿಸಿದ್ದಾರೆ.

ಹೀರಾಬೆನ್ ಅವರು ಪ್ರಧಾನಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಗಾಂಧಿನಗರದ ಹೊರವಲಯದಲ್ಲಿರುವ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಈ ಪ್ರದೇಶವು ಬಿಜೆಪಿ ಆಡಳಿತವಿರುವ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಗೆ ಬರುತ್ತದೆ.

ಹೀರಾಬೆನ್ ಅವರು ಜೂನ್ 18, 1923ರಂದು ಜನಿಸಿದರು. ನಾಡಿದ್ದು ಜೂನ್ 18 ರಂದು ಗುಜರಾತ್‌ನಲ್ಲಿರುವ ಪ್ರಧಾನಿ ಮೋದಿ ಅವರು ತಮ್ಮ ತಾಯಿಯನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೋದಿ ಅವರು ಜೂನ್ 18 ರಂದು ಗುಜರಾತ್‌ಗೆ ಒಂದು ದಿನದ ಭೇಟಿ ನೀಡಲಿದ್ದು, ಅವರು ಪಾವಗಡ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ, ನಂತರ ವಡೋದರಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಂದು ಅಹಮದಾಬಾದ್‌ನ ಜಗನ್ನಾಥ ದೇವಸ್ಥಾನದಲ್ಲಿ ಮೋದಿ ಕುಟುಂಬವು 'ಭಂಡಾರೋಟ (ಸಮುದಾಯ ಭೋಜನ) ಆಯೋಜಿಸಿದೆ.

ವಡ್ನಗರ್‌ನಲ್ಲಿರುವ ಹಟಕೇಶ್ವರ ಮಹಾದೇವ ದೇವಸ್ಥಾನವು ಪ್ರಧಾನಿಯವರ ತಾಯಿಯ ದೀರ್ಘಾಯುಷ್ಯ ಮತ್ತು ಆರೋಗ್ಯಕ್ಕಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಕಳೆದ ಮಾರ್ಚ್‌ನಲ್ಲಿ ಪ್ರಧಾನಿ ಮೋದಿ ಕೊನೆಯ ಬಾರಿಗೆ ತಮ್ಮ ತಾಯಿಯನ್ನು ಭೇಟಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT