ಮಲ್ಲಿಕಾರ್ಜುನ ಖರ್ಗೆ ಮತ್ತಿತರರು 
ದೇಶ

ನವದೆಹಲಿ: ಪ್ರತಿಭಟನೆ ನಡೆಸಿದ ಸಂಸದರ ಪಕ್ಕೆಲುಬು ಮುರಿತ; ಅನ್ನ, ನೀರು ಕೊಡದೆ ಬಂಧನ- ಕಾಂಗ್ರೆಸ್ ಆರೋಪ

ರಾಹುಲ್ ಗಾಂಧಿ ಇಡಿ ತನಿಖೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷದ ಸಂಸದರು ಹಾಗೂ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ರಾಹುಲ್ ಗಾಂಧಿ ಇಡಿ ತನಿಖೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷದ ಸಂಸದರು ಹಾಗೂ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಪಕ್ಷದ ಕಚೇರಿಯಲ್ಲಿಂದು ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಂಧಿತ ಕಾಂಗ್ರೆಸ್ ಮುಖಂಡರನ್ನು ಅಕ್ರಮವಾಗಿ ಇಟ್ಟುಕೊಳ್ಳಲಾಗಿದೆ. ಕೇಸ್ ಗಳನ್ನು ದಾಖಲಿಸಿಲ್ಲ, ನಮ್ಮ ಕೆಲವು ಮುಖಂಡರ ಪೆಕ್ಕೆಲುಬು ಮುರಿದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಈ ವಿಚಾರದ ಬಗ್ಗೆ ರಾಜ್ಯಸಭಾ ಸಭಾಪತಿ ಅವರಿಗೆ ಮನವಿ ಮಾಡಲಾಗುವುದು, ನಮ್ಮನ್ನು ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದರು. 

ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ಸದಸ್ಯರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯದ ಬಗ್ಗೆ ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ದೂರು ನೀಡಲಾಗುವುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಹೇಳಿದರು. 

ಯಾವುದೇ ಲಿಖಿತ ಆದೇಶವಿಲ್ಲದಿದ್ದರೂ ಸಂಸದರನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಗೆ ಊಟ, ನೀರು ಕೂಡಾ ನೀಡುತ್ತಿಲ್ಲ, ನಮ್ಮನ್ನು ಬಂಧಿಸಿದ್ದೀರಾ ಎಂದು ಸಂಸದರು ಕೇಳಿದರೆ ಪೊಲೀಸರು ಯಾವುದೇ ಉತ್ತರ ನೀಡುತ್ತಿಲ್ಲ. ಇದು ಸಂಪೂರ್ಣವಾಗಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಪ್ರತಿಯೊಂದು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಚಿದಂಬರಂ ಆಕ್ರೋಶ ವ್ಯಕ್ತಪಡಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT