ಪ್ರತಿಭಟನೆಯಲ್ಲಿ ಹೊತ್ತಿ ಉರಿದ ರೈಲು 
ದೇಶ

ಅಗ್ನಿಪಥ ಯೋಜನೆ ವಿರುದ್ಧ ಹಲವು ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ: ರೈಲುಗಳಿಗೆ ಬೆಂಕಿ, ಪೊಲೀಸ್ ಗುಂಡಿಗೆ ಸಿಕಂದರಾಬಾದ್ ನಲ್ಲಿ ಓರ್ವ ಸಾವು

ಕೇಂದ್ರ ಸರ್ಕಾರದ ಹೊಸ ನೇಮಕಾತಿ ಯೋಜನೆ 'ಅಗ್ನಿಪಥ' ವಿರುದ್ಧ ಪ್ರತಿಭಟನೆ ಇದೀಗ ಹೈದರಾಬಾದ್‌ಗೆ ವ್ಯಾಪಿಸಿದೆ, ಪ್ರತಿಭಟನಾಕಾರರು ಶುಕ್ರವಾರ ಬೆಳಿಗ್ಗೆ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಕನಿಷ್ಠ ಏಳು ರೈಲುಗಳಿಗೆ ಬೆಂಕಿ ಹಚ್ಚಿ ಇಡೀ ರೈಲ್ವೆ ನಿಲ್ದಾಣದ ಆವರಣವನ್ನು ದೋಚಿದ್ದಾರೆ.

ನವದೆಹಲಿ: ಸೇನಾ ನೇಮಕಾತಿ ಅಗ್ನಿಪಥ ಹೊಸ ಮಾದರಿ ಯೋಜನೆಯ(Agnipath scheme) ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರವಾಗಿದೆ. ಕೇಂದ್ರ ಸರ್ಕಾರದ ಹೊಸ ನೇಮಕಾತಿ ಯೋಜನೆಯ ವಿರುದ್ಧ ಪ್ರತಿಭಟನೆ ಇದೀಗ ಹೈದರಾಬಾದ್‌ಗೆ ವ್ಯಾಪಿಸಿದೆ, ಪ್ರತಿಭಟನಾಕಾರರು ಶುಕ್ರವಾರ ಬೆಳಿಗ್ಗೆ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಕನಿಷ್ಠ ಏಳು ರೈಲುಗಳಿಗೆ ಬೆಂಕಿ ಹಚ್ಚಿ ಇಡೀ ರೈಲ್ವೆ ನಿಲ್ದಾಣದ ಆವರಣವನ್ನು ದೋಚಿದ್ದಾರೆ.

ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ಅಗ್ನಿಪಥ್ ಪ್ರತಿಭಟನಾಕಾರರ ಮೇಲೆ ರೈಲ್ವೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಮೃತರನ್ನು ವಾರಂಗಲ್ ಜಿಲ್ಲೆಯ ದಾಮೋದರ್ ಎಂದು ಗುರುತಿಸಲಾಗಿದೆ. ರೈಲ್ವೇ ಸಂರಕ್ಷಣಾ ಪಡೆ ಮತ್ತು ತೆಲಂಗಾಣ ಪೊಲೀಸರಿಂದ ಹೆಚ್ಚುವರಿ ಪಡೆಗಳನ್ನು ರೈಲ್ವೇ ನಿಲ್ದಾಣಕ್ಕೆ ಕಳುಹಿಸಲಾಗಿದ್ದು, ಆದಾಗ್ಯೂ ಅಷ್ಟು ಹೊತ್ತಿಗಾಗಲೇ ಸಾಕಷ್ಟು ಹಾನಿ, ದುರಂತ ಸಂಭವಿಸಿದೆ. ಸಿಕಂದರಾಬಾದ್ ನಲ್ಲಿ ಸದ್ಯ ಪರಿಸ್ಥಿತಿ ಕೈಮೀರುತ್ತಿದೆ. ರೈಲು ಬೋಗಿಗಳು ಹೊತ್ತಿ ಉರಿದಿವೆ. ರೈಲು ಬೋಗಿಗಳು ಸುಟ್ಟು ಕರಕಲಾಗಿವೆ. 

ಮತ್ತೊಂದೆಡೆ, ಬಿಹಾರದಲ್ಲಿ ಎರಡನೇ ದಿನವೂ ಪ್ರತಿಭಟನೆ ಮುಂದುವರಿದಿದ್ದು, ಬೇಗುಸರಾಯ್ ಜಿಲ್ಲೆಯಲ್ಲಿ ಉದ್ರಿಕ್ತ ಯುವಕರು ರಾಜಬಾರಾ ಗುಮ್ಟಿ ರಸ್ತೆಯನ್ನು ತಡೆದಿದ್ದಾರೆ. ಪ್ರತಿಭಟನಾಕಾರರು ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟಿಸುತ್ತಿದ್ದು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಹಲವೆಡೆ ರಸ್ತೆ ಸಂಚಾರವನ್ನೂ ನಿರ್ಬಂಧಿಸಲಾಗಿತ್ತು. ಪ್ರತಿಭಟನೆ ವೇಳೆ ರೈಲ್ವೇ ಹಳಿ ಮೇಲೆ ಟೈರ್ ಸುಟ್ಟು ಹಾಕಲಾಯಿತು. ಜಿಲ್ಲೆಯ ಸಾಹೇಬ್‌ಪುರ್‌ಕಮಲ್ ರೈಲು ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿ ಭಾರೀ ಗಲಾಟೆ ಸೃಷ್ಟಿಸಿದ್ದಾರೆ.

ಲಖಿಸರಾಯ್ ಜಿಲ್ಲೆಯು ಇದೇ ರೀತಿಯ ಕೋಲಾಹಲಕ್ಕೆ ಸಾಕ್ಷಿಯಾಯಿತು. ಕೇಂದ್ರ ಸರ್ಕಾರದ ಯೋಜನೆ ವಿರೋಧಿಸಿ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಜಂಟಿಯಾಗಿ ಮೆರವಣಿಗೆ ನಡೆಸಿದರು. ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳು ಮೊಳಗಿದವು.

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಿಯಾದಲ್ಲಿ ಪ್ರಸ್ತುತ ಪಾಟ್ನಾದಲ್ಲಿರುವ ಉಪಮುಖ್ಯಮಂತ್ರಿ ರೇಣು ದೇವಿ ಅವರ ಮನೆ ಮೇಲೆ ದಾಳಿ ನಡೆದಿದೆ. ಲಖಿಸರಾಯ್ ಜಿಲ್ಲೆಯಲ್ಲಿಯೂ ಬಿಜೆಪಿ ಕಚೇರಿ ಮೇಲೆ ದಾಳಿ ನಡೆದಿದೆ. 

ಉತ್ತರ ಪ್ರದೇಶದ ಬಲಿಯಾದಲ್ಲಿ ಇದೇ ರೀತಿಯ ಪ್ರತಿಭಟನೆ ನಡೆಯಿತು. ಅಗ್ನಿಪಥ್ ಯೋಜನೆ ವಿರೋಧಿಸಿ ಬಲ್ಲಿಯಾ ರೈಲು ನಿಲ್ದಾಣದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಬೆಳಿಗ್ಗೆಯಿಂದಲೇ ನಿಲ್ದಾಣದಲ್ಲಿ ಪಡೆಗಳನ್ನು ನಿಯೋಜಿಸಲಾಗಿದೆ. ಕೆಲವು ಗೂಂಡಾಗಳು ಅಲ್ಲಿಗೆ ತಲುಪಿದ್ದರು. ಸಾರ್ವಜನಿಕ ಆಸ್ತಿಗೆ ಹೆಚ್ಚಿನ ಹಾನಿ ಮಾಡದಂತೆ ಅವರನ್ನು ತಡೆಯಲಾಯಿತು. ಕಲ್ಲು ತೂರಾಟಕ್ಕೆ ಯತ್ನಿಸಿದರು. ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಬಲ್ಲಿಯಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೌಮ್ಯ ಅಗರ್ವಾಲ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT