ಕೆ.ಚಂದ್ರಶೇಖರ್ ರಾವ್ 
ದೇಶ

‘ಅಗ್ನಿಪಥ್’ ವಿರೋಧಿಸಿ ಪ್ರತಿಭಟನೆ: ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಕೆಸಿಆರ್

ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಕುಟುಂಬಕ್ಕೆ 25 ಲಕ್ಷ ರೂ. ನೆರವು ಘೋಷಿಸಿದ್ದಾರೆ.

ಹೈದರಾಬಾದ್:  ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಕುಟುಂಬಕ್ಕೆ 25 ಲಕ್ಷ ರೂ. ನೆರವು ಘೋಷಿಸಿದ್ದಾರೆ.

ತೆಲಂಗಾಣದ ಸಿಕಂದರಾಬಾದ್‌ನಲ್ಲಿ ಹತ್ತೊಂಬತ್ತು ವರ್ಷದ ರಾಕೇಶ್ ಎಂಬಾತ ನಿನ್ನೆ ಹೊಸ ಅಲ್ಪಾವಧಿ ಸೇನಾ ನೇಮಕಾತಿ ಯೋಜನೆಯ ವಿರುದ್ಧ ಪ್ರತಿಭಟನೆಯ ವೇಳೆ ರೈಲಿಗೆ ಬೆಂಕಿ ಹಚ್ಚಿದ ಗುಂಪೊಂದರ ಮೇಲೆ ಪೊಲೀಸರು ಗುಂಡು ಹಾರಿಸಿದ್ದರಿಂದ ಹತ್ಯೆಗೀಡಾಗಿದ್ದಾನೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ರೈಲ್ವೆ ಪೊಲೀಸ್ ಫೈರಿಂಗ್‌ನಲ್ಲಿ ವಾರಂಗಲ್ ಮೂಲದ ರಾಕೇಶ್ ಸಾವನ್ನಪ್ಪಿದ್ದಕ್ಕಾಗಿ ಮುಖ್ಯಮಂತ್ರಿಗಳು ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.ವ್ಯಕ್ತಿಯ ಕುಟುಂಬಕ್ಕೆ 25 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಮತ್ತು ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಿಸಿದೆ.

ಯುವಕನ ಸಾವಿಗೆ ಕೇಂದ್ರದ “ತಪ್ಪು ನೀತಿ” ಯನ್ನು ದೂಷಿಸಿದ ಮುಖ್ಯಮಂತ್ರಿ ಕೆಸಿಆರ್ ರಾಜ್ಯ ಸರ್ಕಾರ ತೆಲಂಗಾಣದ ಮಕ್ಕಳನ್ನು ರಕ್ಷಿಸುತ್ತದೆ ಎಂದು ಒತ್ತಿ ಹೇಳಿದರು.ರಕ್ಷಣಾ ಸೇವೆಗಳಿಗೆ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಯನ್ನು ಕೇಂದ್ರವು ಘೋಷಿಸಿದ ನಂತರ ಕಳೆದೆರಡು ದಿನಗಳಿಂದ ಪ್ರತಿಭಟನೆಗಳು ಭುಗಿಲೆದ್ದಿರುವ ಹಲವಾರು ರಾಜ್ಯಗಳಲ್ಲಿ ತೆಲಂಗಾಣವೂ ಸೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT