ರಾಹುಲ್ ಗಾಂಧಿ 
ದೇಶ

ಪ್ರಧಾನಿ ಮೋದಿ ‘ಮಾಫಿವೀರ್’ ಆಗುವ ಮೂಲಕ ಅಗ್ನಿಪಥ್ ಯೋಜನೆ ಹಿಂಪಡೆಯಬೇಕು: ರಾಹುಲ್ ಗಾಂಧಿ

ಸತತ ಎಂಟು ವರ್ಷಗಳಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ‘ಜೈ ಜವಾನ್, ಜೈ ಕಿಸಾನ್’ ಮೌಲ್ಯಗಳನ್ನು ಅವಮಾನಿಸಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಕಿಡಿಕಾರಿದ್ದಾರೆ.

ಮುಂಬೈ: ಸತತ ಎಂಟು ವರ್ಷಗಳಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ‘ಜೈ ಜವಾನ್, ಜೈ ಕಿಸಾನ್’ ಮೌಲ್ಯಗಳನ್ನು ಅವಮಾನಿಸಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ಹಿಂಪಡೆದಂತೆಯೇ ಯುವಕರ ಬೇಡಿಕೆಯನ್ನು ಒಪ್ಪಿಕೊಳ್ಳಬೇಕು ಮತ್ತು ಅಗ್ನಿಪಥ್ ರಕ್ಷಣಾ ನೇಮಕಾತಿ ಯೋಜನೆಯನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒತ್ತಾಯಿಸಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಪ್ರಧಾನಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ನಾನು ಮೊದಲೇ ಹೇಳಿದ್ದೆ. ಅದೇ ರೀತಿ ‘ಮಾಫಿವೀರ್’ ಆಗುವ ಮೂಲಕ ದೇಶದ ಯುವಕರ ಬೇಡಿಕೆಯನ್ನು ಒಪ್ಪಿಕೊಂಡು ‘ಅಗ್ನಿಪಥ’ ಯೋಜನೆಯನ್ನು ಹಿಂಪಡೆಯಬೇಕು ಎಂದು ಹೇಳಿದ್ದಾರೆ.

ಯೋಜನೆಯನ್ನು ಘೋಷಿಸಿದ ಸರ್ಕಾರ, 17 ರಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೇನೆ ಸೇರ್ಪಡೆಗೊಳಿಸಲಾಗುವುದು ಮತ್ತು ಶೇ. 25 ರಷ್ಟು ನೇಮಕಾತಿಗಳನ್ನು ನಿಯಮಿತ ಸೇವೆಗಾಗಿ ಉಳಿಸಿಕೊಳ್ಳಲಾಗುವುದು ಎಂದು ಹೇಳಿತ್ತು. ಈ ಹೊಸ ಯೋಜನೆ ವಿರುದ್ಧ ಯುವಕರ ಪ್ರತಿಭಟನೆ ವ್ಯಾಪಕವಾಗುತ್ತಿದ್ದಂತೆ ಗುರುವಾರ ಗರಿಷ್ಠ ವಯೋಮಿತಿಯನ್ನು 23 ವರ್ಷಕ್ಕೆ ಏರಿಸಲಾಗಿದೆ.

ಇನ್ನು ತೆಲಂಗಾಣ, ಕೇರಳ, ಬಿಹಾರ, ದೆಹಲಿ, ಉತ್ತಪ್ರದೇಶ ಹೀಗೆ ಹಲವು ರಾಜ್ಯಗಳಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆಗಳು ವ್ಯಾಪಕವಾಗುತ್ತಿದ್ದು, ಈಗಾಗಲೇ ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾಕಾರರು ಪ್ರತಿಭಟನೆ ವೇಳೆ ಸಾಕಷ್ಟು ಸಾರ್ವಜನಿಕ ಆಸ್ತಿಗೆ ಹಾನಿಯನ್ನುಂಟು ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!