ವಾಟ್ಸಾಪ್ 
ದೇಶ

ಅಗ್ನಿಪಥ್ ಸಂಘರ್ಷ: ಸುಳ್ಳು ಮಾಹಿತಿ ಪ್ರಸಾರ ಆರೋಪ, 35 ವಾಟ್ಸಪ್ ಗ್ರೂಪ್ ನಿಷೇಧ!

ಸೇನಾ ನೇಮಕಾತಿಯ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಿರುವಂತೆಯೇ ಇತ್ತ ಸುಳ್ಳು ಮಾಹಿತಿ ಪ್ರಸಾರ ಮಾಡುತ್ತಿದ್ದ ಆರೋಪದ ಮೇರೆಗೆ 35 ವಾಟ್ಸಪ್ ಗ್ರೂಪ್ ಗಳನ್ನು ನಿಷೇಧಿಸಲಾಗಿದೆ.

ನವದೆಹಲಿ: ಸೇನಾ ನೇಮಕಾತಿಯ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಿರುವಂತೆಯೇ ಇತ್ತ ಸುಳ್ಳು ಮಾಹಿತಿ ಪ್ರಸಾರ ಮಾಡುತ್ತಿದ್ದ ಆರೋಪದ ಮೇರೆಗೆ 35 ವಾಟ್ಸಪ್ ಗ್ರೂಪ್ ಗಳನ್ನು ನಿಷೇಧಿಸಲಾಗಿದೆ.

ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದ 35 ವಾಟ್ಸಾಪ್ ಗುಂಪುಗಳನ್ನು ಸರ್ಕಾರ ಭಾನುವಾರ ನಿಷೇಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಯೋಜನೆ ಘೋಷಣೆಯಾದಾಗಿನಿಂದ ದೇಶದ ವಿವಿಧ ಭಾಗಗಳಲ್ಲಿ ಯೋಜನೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆಯೇ ಈ ಕ್ರಮವು ಬಂದಿದೆ.

ಆದಾಗ್ಯೂ, ಈ ಗುಂಪುಗಳ ಬಗ್ಗೆ ಮಾಹಿತಿ ಅಥವಾ ಅವುಗಳ ನಿರ್ವಾಹಕರ ವಿರುದ್ಧ ಯಾವುದೇ ಕ್ರಮವನ್ನು ಪ್ರಾರಂಭಿಸಲಾಗಿದೆಯೇ ಎಂದು ತಕ್ಷಣವೇ ತಿಳಿದಿಲ್ಲ. ವಾಟ್ಸ್‌ಆ್ಯಪ್‌ ಮೂಲಕ ಸುಳ್ಳು ಮಾಹಿತಿ ಹಬ್ಬಿಸುವುದು ಹಾಗೂ ಪ್ರತಿಭಟನೆಗಳನ್ನು ಆಯೋಜಿಸಿರುವ ಆರೋಪಗಳ ಮೇಲೆ ಕನಿಷ್ಠ 10 ಜನರನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಹರಿದಾಡುತ್ತಿರುವ ಮಾಹಿತಿಯ ನೈಜತೆಯನ್ನು ತಿಳಿಯಲು 'ಫ್ಯಾಕ್ಟ್‌ಚೆಕ್‌ಗಾಗಿ' ವಾಟ್ಸ್‌ಆ್ಯಪ್‌ ಸಂಖ್ಯೆ (8799711259) ತೆರೆದಿದೆ ಎಂದು ಹೇಳಲಾಗಿದೆ. ಅಗ್ನಿಪಥ ಯೋಜನೆಯನ್ನು ಖಂಡಿಸಿ ದೇಶದ ಹಲವು ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ರೈಲಿನ ಬೋಗಿಗಳಿಗೆ ಬೆಂಕಿ, ಸಾರ್ವಜನಿಕ ಆಸ್ತಿ–ಪಾಸ್ತಿ ಹಾನಿ, ರಸ್ತೆ ತಡೆ ನಡೆಸಲಾಗಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದು ಹಿಂಸಾಚಾರಕ್ಕೂ ಕಾರಣವಾಗಿದೆ. ಈ ನಡುವೆ ಸರ್ಕಾರವು 'ಸುಳ್ಳು ಸುದ್ದಿ' ತಡೆಯುವ ಕಾರ್ಯಾಚರಣೆ ನಡೆಸುತ್ತಿದೆ.

ಸಶಸ್ತ್ರ ಪಡೆಗಳಲ್ಲಿ ತಾರುಣ್ಯವನ್ನು ತರುವ ಯೋಜನೆಯ ಭಾಗ ಅಗ್ನಿಪಥ ಎಂದು ರಕ್ಷಣಾ ಪಡೆಗಳ ಉನ್ನತ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ಈ ಯೋಜನೆಯನ್ನು ಹಿಂಪಡೆಯುವುದಿಲ್ಲ ಎಂದೂ ಭಾನುವಾರ ಸ್ಪಷ್ಟಪಡಿಸಿದ್ದಾರೆ.  
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ