ದೇಶ

ರಾಷ್ಟ್ರಪತಿ ಚುನಾವಣೆ: ಪವಾರ್ ಸುದ್ದಿಗೋಷ್ಠಿಯಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸುವ ಸಾಧ್ಯತೆ ಕ್ಷೀಣ

Srinivas Rao BV

ಕೋಲ್ಕತ್ತ: ಮುಂಬರುವ ರಾಷ್ಟ್ರಪತಿ ಚುನಾವಣೆಯ ಬಗ್ಗೆ ಜೂ.21 ರಂದು ಶರತ್ ಪವಾರ್ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಗವಹಿಸುವ ಸಾಧ್ಯತೆ ಕ್ಷೀಣವಾಗಿದೆ. 

ಪೂರ್ವನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಭಾಗಹಿಸುವ ಸಾಧ್ಯತೆ ಕಡಿಮೆ ಎಂದು ಟಿಎಂಸಿ ವಕ್ತಾರರು ಹೇಳಿದ್ದಾರೆ. 

ಮಮತಾ ಬ್ಯಾನರ್ಜಿ ಬದಲಾಗಿ ಟಿಎಂಸಿಯ ಹಿರಿಯ ನಾಯಕರೊಬ್ಬರು ಭಾಗವಹಿಸಲಿದ್ದಾರೆ. ತಾವು ವ್ಯಸ್ಥರಾಗಿರುವ ಕಾರಣದಿಂದಾಗಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಅಂಶವನ್ನು ಮಮತಾ ಬ್ಯಾನರ್ಜಿ ಶರದ್ ಪವಾರ್ ಗೆ ತಿಳಿಸಿದ್ದಾರೆ. 

SCROLL FOR NEXT