ಸಾಂದರ್ಭಿಕ ಚಿತ್ರ 
ದೇಶ

'ಅಗ್ನಿಪಥ್' ಯೋಜನೆ ವಿರೋಧಿಸಿ ಭಾರತ್ ಬಂದ್: ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ, 181 ರೈಲುಗಳ ಸಂಚಾರ ಸ್ಥಗಿತ

ಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ನವದೆಹಲಿ: ಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಅಗ್ನಿವೀರರನ್ನು ನೇಮಕ ಮಾಡಿಕೊಳ್ಳಲು ಕೇಂದ್ರ ಸಚಿವ ಸಂಪುಟ ಜೂನ್ 14 ರಂದು ಒಪ್ಪಿಗೆ ನೀಡಿತ್ತು. ಆದರೆ, ಗುತ್ತಿಗೆ ಆಧಾರದ ಕೇವಲ ನಾಲ್ಕು ವರ್ಷದ ಸೇವೆಯನ್ನು ವಿರೋಧಿಸಿ ದೆಹಲಿ, ಉತ್ತರ ಪ್ರದೇಶ, ಬಿಹಾರ, ಹರಿಯಾಣ, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಪಂಜಾಬ್, ಜಾರ್ಖಂಡ್, ಅಸ್ಸಾಂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಕೆಲವು ಕಡೆಗಳಲ್ಲಿ ಪ್ರತಿಭಟನೆ ಹಿಂಸಾತ್ಮಾಕ ರೂಪ ಪಡೆದುಕೊಂಡಿದ್ದು, ಪ್ರತಿಭಟನಾಕರರು ರೈಲು, ವಾಹನಗಳಿಗೆ ಬೆಂಕಿ ಹಚ್ಚಿದ್ದು, ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ ಪಾಸ್ತಿಗೆ ನಷ್ಟವನ್ನುಂಟು ಮಾಡಿದ್ದಾರೆ.

ಅಗ್ನಿಪಥ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕಾರಣದಿಂದಾಗಿ 181 ಮೇಲ್ ಎಕ್ಸ್ ಪ್ರೆಸ್ ರೈಲುಗಳು ಮತ್ತು 348 ಪ್ರಯಾಣಿಕ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಾಲ್ಕು ಮೇಲ್ ಎಕ್ಸ್ ಪ್ರೆಸ್ ಮತ್ತು 6 ಪ್ರಯಾಣಿಕರ ರೈಲುಗಳು ಭಾಗಶ: ಸೇವೆಯನ್ನು ಸ್ಥಗಿತಗೊಳಿಸಿವೆ ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video