ಏಕತಾ ಪ್ರತಿಮೆ 
ದೇಶ

ಗುಜರಾತ್‌ನ ಏಕತಾ ಪ್ರತಿಮೆ ಬಳಿ 3.1 ತೀವ್ರತೆಯ ಭೂಕಂಪನ; ಯಾವುದೇ ಹಾನಿಯಾಗಿಲ್ಲ: ಅಧಿಕಾರಿಗಳು

ಗುಜರಾತ್‌ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ 3.1 ತೀವ್ರತೆಯ ಭೂಕಂಪನ ದಾಖಲಾಗಿದೆ. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಅಹಮದಾಬಾದ್: ಗುಜರಾತ್‌ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ 3.1 ತೀವ್ರತೆಯ ಭೂಕಂಪನ ದಾಖಲಾಗಿದೆ. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಕೆವಾಡಿಯಾ ಗ್ರಾಮದ ಬಳಿ 182 ಮೀಟರ್ ಎತ್ತರದ ಏಕತಾ ಪ್ರತಿಮೆಯಿದೆ. ಸೋಮವಾರ ರಾತ್ರಿ ಕಂಪನ ದಾಖಲಾಗಿದೆ. ಪ್ರಬಲ ಭೂಕಂಪಗಳು ಮತ್ತು ಚಂಡಮಾರುತಗಳನ್ನು ತಡೆದುಕೊಳ್ಳುವ ರೀತಿಯಲ್ಲಿ ನಿರ್ಮಿಸಲಾದ ಏಕತಾ ಪ್ರತಿಮೆಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಮಾರಕದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಹುಲ್ ಪಟೇಲ್ ಹೇಳಿದ್ದಾರೆ.

ಕಂಪನದ ಕೇಂದ್ರಬಿಂದು ಕೆವಾಡಿಯಾದಿಂದ ಪೂರ್ವ-ಆಗ್ನೇಯಕ್ಕೆ 12 ಕಿಮೀ ದೂರದಲ್ಲಿದೆ ಎಂದು ಗಾಂಧಿನಗರ ಮೂಲದ ಭೂಕಂಪನ ಸಂಶೋಧನಾ ಸಂಸ್ಥೆ (ಐಎಸ್‌ಆರ್) ಹೇಳಿಕೆಯಲ್ಲಿ ತಿಳಿಸಿದೆ.

"ಸೋಮವಾರ ರಾತ್ರಿ 10.07 ಗಂಟೆಗೆ 3.1 ತೀವ್ರತೆಯ ಕಂಪನವು ದಾಖಲಾಗಿದ್ದು, ದಕ್ಷಿಣ ಗುಜರಾತ್‌ನ ಕೆವಾಡಿಯಾದಿಂದ ಪೂರ್ವ-ಆಗ್ನೇಯಕ್ಕೆ 12 ಕಿಮೀ ದೂರದಲ್ಲಿ 12.7 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದು ದಾಖಲಾಗಿದೆ  ಎಂದು ಐಎಸ್‌ಆರ್‌ ತಿಳಿಸಿದೆ. 

ಕಂಪನದಿಂದಾಗಿ ಈ ಪ್ರದೇಶದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ವರದಿಯಾಗಿಲ್ಲ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT