ಸಿಧು ಮೂಸೆವಾಲಾ 
ದೇಶ

ಮೂಸೆವಾಲ ಹತ್ಯೆಗೆ ಗಡಿಯಾಚೆಯಿಂದ ಮಾರಕಾಸ್ತ್ರಗಳ ಪೂರೈಕೆ!

ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಗೆ ಬಳಕೆ ಮಾಡಲಾದ ಮಾರಕಾಸ್ತ್ರಗಳು ಕೊಲೆಗಡುಕರ ಕೈಗೆ ಸೇರಿದ್ದು ಗಡಿಯಾಚೆಯಿಂದ ಎಂಬ ಅಂಶ ದೆಹಲಿ ಪೊಲೀಸರ ಗಮನಕ್ಕೆ ಬಂದಿದೆ. 

ದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಗೆ ಬಳಕೆ ಮಾಡಲಾದ ಮಾರಕಾಸ್ತ್ರಗಳು ಕೊಲೆಗಡುಕರ ಕೈಗೆ ಸೇರಿದ್ದು ಗಡಿಯಾಚೆಯಿಂದ ಎಂಬ ಅಂಶ ದೆಹಲಿ ಪೊಲೀಸರ ಗಮನಕ್ಕೆ ಬಂದಿದೆ. 

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಸೆಲ್ ಸೋಮವಾರದಂದು ಇಬ್ಬರು ಪ್ರಮುಖ ಶೂಟರ್ ಗಳೂ ಸೇರಿದಂತೆ ಮೂವರನ್ನು ಬಂಧಿಸಿದ್ದರು.  ಇದೇ ದಿನದಂದು ಕೋರ್ಟ್ ಮೂವರನ್ನೂ 14 ದಿನಗಳ ಕಾಲ ವಿಶೇಷ ಸೆಲ್ ವಶಕ್ಕೆ ನೀಡಿ ಆದೇಶಿಸಿತ್ತು. 

ಮೂಸೆವಾಲ ಹತ್ಯೆಗೆ ಬಳಕೆ ಮಾಡಲಾದ ಮಾರಕಾಸ್ತ್ರಗಳು ಗಡಿಯಾಚೆಯಿಂದ ಪೂರೈಕೆಯಾಗಿತ್ತು ಎಂಬ ಮಾಹಿತಿಯನ್ನು ದೆಹಲಿ ಪೊಲೀಸ್ ಇಲಾಖೆಯ ವಿಶೇಷ ಸೆಲ್ ಪಡೆದಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, 50 ಸುತ್ತಿನ 8 ಅತ್ಯಾಧುನಿಕ ಸ್ಫೋಟಕ ಗ್ರೆನೇಡ್ ಗಳು ಹಾಗೂ ಗ್ರೆನೇಡ್ ಲಾಂಚರ್ ಗಳು, 9 ಎಲೆಕ್ಟ್ರಿಕ್ ಡೆಟೋನೇಟರ್ ಗಳನ್ನು ವಶಕ್ಕೆ ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT