ಶತ್ರುಘ್ನ ಸಿನ್ಹಾ 
ದೇಶ

ಅಗ್ನಿವೀರರು ಸಮರ್ಥರಾಗಿದ್ದರೆ 4 ವರ್ಷದ ನಂತರ ಏಕೆ ನಿವೃತ್ತಿಗೊಳಿಸುತ್ತೀರಿ?: ಶತ್ರುಘ್ನ ಸಿನ್ಹಾ

ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು “ಅಗ್ನಿಪಥ್” ನೇಮಕಾತಿ ಯೋಜನೆಯನ್ನು ದೋಷಪೂರಿತ ನೀತಿ ಎಂದು ಘೋಷಿಸಿದ್ದಾರೆ. ಮತ್ತು ಅದನ್ನ ಹಿಮ್ಮೆಟ್ಟಿಸಲು ಪ್ರತಿಭಟನೆಗಳು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ:  ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು “ಅಗ್ನಿಪಥ್” ನೇಮಕಾತಿ ಯೋಜನೆಯನ್ನು ದೋಷಪೂರಿತ ನೀತಿ ಎಂದು ಘೋಷಿಸಿದ್ದಾರೆ. ಮತ್ತು ಅದನ್ನ ಹಿಮ್ಮೆಟ್ಟಿಸಲು ಪ್ರತಿಭಟನೆಗಳು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಅಗ್ನಿಪಥ್ ಯೋಜನೆ ಕಿರಿಯ ಮತ್ತು ಹೆಚ್ಚು ತಂತ್ರಜ್ಞಾನ-ಬುದ್ಧಿವಂತ ಪಡೆಯನ್ನು ರಚಿಸಲು ಸಹಾಯ ಮಾಡುತ್ತದೆ ಎಂಬ ಸರ್ಕಾರದ ದೃಷ್ಟಿಕೋನವನ್ನು ಸಿನ್ಹಾ ಟೀಕಿಸಿದ್ದಾರೆ. ಹಾಗಾದರೆ ಇಷ್ಟು ಸಮರ್ಥರು ಕೇವಲ ನಾಲ್ಕು ವರ್ಷಗಳ ನಂತರ ಹೇಗೆ ನಿವೃತ್ತರಾಗುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಭದ್ರತಾ ಸಿಬ್ಬಂದಿಯಾಗಲು ನೀವು ನಾಲ್ಕು ವರ್ಷಗಳ ನಂತರ ಅವರನ್ನು ಹೊರಹಾಕುತ್ತೀರಾ? ಈ ನೀತಿಯ ವಿರುದ್ಧ ಸೇನೆಯ ಅತ್ಯುತ್ತಮರು ಮಾತನಾಡುವುದನ್ನು ನಾನು ನೋಡಿದ್ದೇನೆ ಎಂದು ತೃಣಮೂಲ ಸಂಸದ ಕುಟುಕಿದ್ದಾರೆ.

“ಜನರಲ್ ರಾವತ್ (ಬಿಪಿನ್ ರಾವತ್) ಕೂಡ ಸೇನೆಯ ಜನರು 58 ವರ್ಷಕ್ಕೆ ನಿವೃತ್ತಿ ಪಡೆಯಬೇಕೆಂದು ಹೇಳಿದ್ದರು. ಮತ್ತು ಈಗ ವಿಭಿನ್ನ ರಾಗ ಮತ್ತು ವಿಭಿನ್ನ ಸ್ವರ. ಇದೆಲ್ಲ ಏಕೆ? ಅವರು ನಮ್ಮ ರಾಷ್ಟ್ರದ ಜನರು, ಅವರು ನಮ್ಮ ಮಕ್ಕಳು. ಅವರನ್ನು ನೋಡಿಕೊಳ್ಳಬೇಕು ಅಷ್ಟು ಮಾತ್ರವಲ್ಲದೆ ಅವರ ಕುಟುಂಬಗಳನ್ನೂ ಕೂಡ ಎಂದು ಹೇಳಿದರು.

ನಾಲ್ಕು ವರ್ಷದ ನಂತರ ಶೇಕಡಾ 25 ರಷ್ಟು ಸಿಬ್ಬಂದಿಯನ್ನ ಸೇನೆಯಲ್ಲಿ ಮುಂದುವರೆಸಲಾಗುತ್ತೆ ಎಂದು ಹೇಳಿದ್ದೀರ. ಹಾಗಾದರೆ ಆ ಶೇಕಡಾ 25 ರಷ್ಟು ಮಂದಿ ಯಾರು? ಅವರು ನಿಮ್ಮ ಸ್ವಂತ ಜನರೇ? ನೀವು ಯಾರಿಗೆ ಒಲವು ತೋರುತ್ತೀರಿ?” ಎಂದು ಸಿನ್ಹಾ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT