10 ರೂಪಾಯಿ ನಾಣ್ಯ (ಸಂಗ್ರಹ ಚಿತ್ರ) 
ದೇಶ

ಅರಿವು ಮೂಡಿಸುವುದಕ್ಕಾಗಿ 10 ರೂ. ನಾಣ್ಯಗಳನ್ನು ನೀಡಿ ಕಾರು ಖರೀದಿಸಿದ ವೈದ್ಯ! 

ಇತ್ತೀಚಿನ ದಿನಗಳಲ್ಲಿ 10 ರೂಪಾಯಿ ನಾಣ್ಯದ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಈ ನಾಣ್ಯ ಸ್ವೀಕರಿಸುವುದನ್ನೇ ಹಲವು ಬಿಟ್ಟಿದ್ದಾರೆ. ಇಂಥಹ ಪರಿಸ್ಥಿತಿಯಲ್ಲಿ ಜನತೆಯಲ್ಲಿ ಅರಿವು ಮೂಡಿಸಲು ಧರ್ಮಪುರಿಯ ವೈದ್ಯರೊಬ್ಬರು ವಿನೂತನವಾದ ಕ್ರಮ ಕೈಗೊಂಡಿದ್ದಾರೆ. 

ಧರ್ಮಪುರಿ: ಇತ್ತೀಚಿನ ದಿನಗಳಲ್ಲಿ 10 ರೂಪಾಯಿ ನಾಣ್ಯದ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಈ ನಾಣ್ಯ ಸ್ವೀಕರಿಸುವುದನ್ನೇ ಹಲವು ಬಿಟ್ಟಿದ್ದಾರೆ. ಇಂಥಹ ಪರಿಸ್ಥಿತಿಯಲ್ಲಿ ಜನತೆಯಲ್ಲಿ ಅರಿವು ಮೂಡಿಸಲು ಧರ್ಮಪುರಿಯ ವೈದ್ಯರೊಬ್ಬರು ವಿನೂತನವಾದ ಕ್ರಮ ಕೈಗೊಂಡಿದ್ದಾರೆ. 

27 ವರ್ಷದ ಹೋಮಿಯೋಪತಿ ವೈದ್ಯ ಡಾ. ಎ ವೆಟ್ರಿವೇಲ್ ಎಂಬುವವರು 60,000 10 ರೂಪಾಯಿ ನಾಣ್ಯಗಳನ್ನು ನೀಡಿ ಕಾರು ಖರೀದಿಸಿದ್ದಾರೆ. ಈ ಮೂಲಕ ಜನತೆಯಲ್ಲಿ ಅರಿವು ಮೂಡಿಸಲು ಮುಂದಾಗಿದ್ದಾರೆ. 

ಶಾಲೆಯನ್ನೂ ನಡೆಸುತ್ತಿರುವ ಈ ವೈದ್ಯ ತಮ್ಮ ನಿರ್ಧಾರದ ಬಗ್ಗೆ ಮಾತನಾಡುತ್ತಾ " ಕಳೆದ ತಿಂಗಳು ನಾನು ವಿದ್ಯಾರ್ಥಿಗಳೊಂದಿಗೆ ಮಾತನಾದುತ್ತಿದ್ದಾಗ ಅವರು 10 ರೂಪಾಯಿ ನಾಣ್ಯ ಇಟ್ಟುಕೊಂಡು ಆಡುತ್ತಿದ್ದುದ್ದನ್ನು ಗಮನಿಸಿದೆ. ಹೀಗೇಕೆ ಆಡುತ್ತಿದ್ದೀರಿ? ಎಂದು ಪ್ರಶ್ನಿಸಿದಾಗ 10 ರೂಪಾಯಿ ನಾಣ್ಯವನ್ನು ಧರ್ಮಪುರಿಯಲ್ಲಿ ಯಾವ ಅಂಗಡಿಗಳಲ್ಲೂ ಸ್ವೀಕರಿಸುತ್ತಿಲ್ಲ ಎಂಬ ಮಾಹಿತಿ ಸಿಕ್ಕಿತು. ನಾನು ಈ ಬಗ್ಗೆ ಅರಿವು ಮೂಡಿಸಲು ನಿರ್ಧರಿಸಿ ಕಳೆದ 30 ದಿನಗಳಿಂದ ಮನೆ ಮನೆಗಳಿಗೆ ತೆರಳಿ, ನಾಣ್ಯ ಸಂಗ್ರಹಿಸಿ ಅದನ್ನು 10 ರೂಪಾಯಿ ನೋಟುಗಳೊಂದಿಗೆ ಬದಲಾಯಿಸುತ್ತಿದ್ದೆ. ಬ್ಯಾಂಕ್ ಗಳಿಂದಲೂ ಸಹ ನಾನು ನಾಣ್ಯಗಳನ್ನು ಸಂಗ್ರಹಿಸಿದ್ದೆ.

ಜನರು ನಾಣ್ಯಗಳನ್ನು ನೋಟುಗಳೊಂದಿಗೆ ಬದಲಿಸಲು ಅತ್ಯಂತ ಸಂತಸದಿಂದ ಮುಂದಾಗಿದ್ದರು. 60,000 ನಾಣ್ಯಗಳನ್ನು ಸಂಗ್ರಹಿಸಿ ಶೋ ರೂಮ್ ಗೆ ಅದೇ ನಾಣ್ಯಗಳನ್ನು ನೀಡಿ, ಕಾರನ್ನೂ ಖರೀದಿಸಿದೆ ಎನ್ನುತ್ತಾರೆ ವೈದ್ಯ ಡಾ. ಎ ವೆಟ್ರಿವೇಲ್. 

ಉಮಾಶಂಕರ್ ಎಂಬ ವರ್ತಕ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡುತ್ತಾ, ಹಲವು ಡೀಲರ್ ಗಳ ಬಳಿ 10 ರೂಪಾಯಿ ನಾಣ್ಯವಿದೆ. ಏಕೆಂದರೆ ಗ್ರಾಹಕರು ಅದನ್ನು ಸ್ವೀಕರಿಸುವುದಿಲ್ಲ. ಬ್ಯಾಂಕ್ ಗಳೂ ಇದಕ್ಕೇನು ಹೊರತಲ್ಲ.

ನನ್ನ ಬಳಿ 10 ರೂಪಾಯಿಗಳ 250 ನಾಣ್ಯಗಳಿವೆ ಎಂದು ಹೇಳಿದ್ದಾರೆ. ಧರ್ಮಪುರಿಯ ಮುಂಚೂಣಿಯಲ್ಲಿರುವ ಬ್ಯಾಂಕ್ ಮ್ಯಾನೇಜರ್, ಈ ಬಗ್ಗೆ ಮಾತನಾಡಿದ್ದು, ಆರ್ ಬಿಐ 10 ರೂಪಾಯಿ ನಾಣ್ಯಗಳು ಸಿಂಧುತ್ವ ಹೊಂದಿದೆ ಎಂಬುದನ್ನು ಸ್ಪಷ್ಟಪಡಿಸಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

SCROLL FOR NEXT