ಬಾಬಾ ರಾಮದೇವ್ 
ದೇಶ

ಯೋಗ ಆಧ್ಯಾತ್ಮಿಕವೇ ಹೊರತು ಧಾರ್ಮಿಕವಲ್ಲ: ಬಾಬಾ ರಾಮದೇವ್

ಯೋಗ ಎಲ್ಲರಿಗೂ ಸೇರಿದ್ದು, ಅದನ್ನು ಯಾವುದೇ ಧರ್ಮ ಅಥವಾ ರಾಜಕೀಯ ಪಕ್ಷದೊಂದಿಗೆ ಜೋಡಿಸಬೇಡಿ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಮಂಗಳವಾರ ಹೇಳಿದ್ದಾರೆ.

ಹರಿದ್ವಾರ (ಉತ್ತರಾಖಂಡ): ಯೋಗ ಎಲ್ಲರಿಗೂ ಸೇರಿದ್ದು, ಅದನ್ನು ಯಾವುದೇ ಧರ್ಮ ಅಥವಾ ರಾಜಕೀಯ ಪಕ್ಷದೊಂದಿಗೆ ಜೋಡಿಸಬೇಡಿ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಮಂಗಳವಾರ ಹೇಳಿದ್ದಾರೆ.

ಅಂತರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‌ದೇವ್ ಅವರು ಇಂದು ಹರಿದ್ವಾರದ ಪತಾಂಜಲಿ ಯೋಗಪೀಠದಲ್ಲಿ ಯೋಗ ಮಾಡಿದರು.

ಇಂದು ಬೆಳಿಗ್ಗೆ 5 ಗಂಟೆಗೆ ಯೋಗವನ್ನು ಪ್ರಾರಂಭಿಸಿದ ಅವರು, ಬೆಳಿಗ್ಗೆ 8 ಗಂಟೆಯವರೆಗೂ ವಿವಿಧ ಯೋಗಾಸನಗಳನ್ನು ಮಾಡಿದರು. ಈ ವೇಳೆ 10,000 ಹೆಚ್ಚು ಮಂದಿ ಅವರ ಅನುಯಾಯಿಗಳೂ ಯೋಗಭ್ಯಾಸ ಮಾಡಿದರು.

ಈ ವೇಳೆ ಬಾಬಾ ರಾಮ್ ದೇವ್ ಅವರು ನಿರ್ದಿಷ್ಟ ಯೋಗ ಆಸನಗಳನ್ನು ಮಾಡುವ ಮೂಲಕ ವಿವಿಧ ಆರೋಗ್ಯ ಪ್ರಯೋಜನಗಳು ಮತ್ತು ವಿವಿಧ ಕಾಯಿಲೆಗಳನ್ನು ಗುಣಪಡಿಸುವ ಬಗ್ಗೆ ವಿವರಿಸಿದರು.

ಯೋಗಾಭ್ಯಾಸದ ಬಳಿಕ ಮಾತನಾಡಿದ ರಾಮ್ ದೇವ್ ಅವರು, ರಾಷ್ಟ್ರವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ನಾವು ನಮ್ಮ ದೇಹವನ್ನು ಯಾವುದೇ ಅನಾರೋಗ್ಯದಿಂದ ಮುಕ್ತವಾಗಿಡುವ ಗುರಿಯನ್ನು ಹೊಂದಬೇಕು. ಇದಕ್ಕಾಗಿ ಪ್ರತಿದಿನ 4ರಿಂದ 5 ಯೋಗಾಸನಗಳನ್ನು ಮಾಡಬೇಕು ಎಂದು ಹೇಳಿದರು.

ಇದೇ ವೇಳೆ ಯೋಗ ಎಲ್ಲರಿಗೂ ಸೇರಿದ್ದಾಗಿದ್ದು, ಅದನ್ನು ಯಾವುದೇ ಧರ್ಮ ಅಥವಾ ರಾಜಕೀಯ ಪಕ್ಷದೊಂದಿಗೆ ಜೋಡಿಸಬಾರದು ಎಂದೂ ಕರೆ ನೀಡಿದರು.

"ಎಲ್ಲ ಧರ್ಮದ ಜನರು ತಮ್ಮ ದೇಹವನ್ನು ಸದೃಢವಾಗಿಡಲು ಮತ್ತು ದೀರ್ಘಕಾಲದ ಕಾಯಿಲೆಯನ್ನು ಗುಣಪಡಿಸಲು ಯೋಗ ಮಾಡುತ್ತಾರೆ. ಕೆಲವರು ತಮ್ಮ ಅಜೆಂಡಾದೊಂದಿಗೆ ಅದನ್ನು ಧರ್ಮದೊಂದಿಗೆ ಜೋಡಿಸಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳ ನಾಯಕರು ಯೋಗ ಮಾಡುವಂತೆ ನಾನು ವಿನಂತಿಸುತ್ತೇನೆ. ಏಕೆಂದರೆ ಯೋಗ ಆಧ್ಯಾತ್ಮಿಕವೇ ಹೊರತು ಯಾವುದೇ ಧರ್ಮಕ್ಕೆ ಸಂಬಂಧಿಸಿದ್ದಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT