ಏಕನಾಥ್ ಶಿಂಧೆ 
ದೇಶ

ಕಾಂಗ್ರೆಸ್, ಎನ್‌ಸಿಪಿ ಜೊತೆಗಿನ ‘ಅಸಹಜ ಮೈತ್ರಿ’ಯನ್ನು ಉದ್ಧವ್ ಠಾಕ್ರೆ ಕಡಿದುಕೊಳ್ಳಬೇಕು: ಏಕನಾಥ್ ಶಿಂಧೆ

ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ(ಎಂವಿಎ) ಒಕ್ಕೂಟವು ‘ಅಸಹಜ ಮೈತ್ರಿಯಾಗಿದ್ದು, ಕೂಡಲೇ ಉದ್ಧವ್ ಠಾಕ್ರೆ ಅದನ್ನು ಕಡಿದುಕೊಳ್ಳಬೇಕು ಎಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ(ಎಂವಿಎ) ಒಕ್ಕೂಟವು ‘ಅಸಹಜ ಮೈತ್ರಿಯಾಗಿದ್ದು, ಕೂಡಲೇ ಉದ್ಧವ್ ಠಾಕ್ರೆ ಅದನ್ನು ಕಡಿದುಕೊಳ್ಳಬೇಕು ಎಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿರುವಂತೆಯೇ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಶಿವಸೇನೆ ಕೂಡಲೇ ಮಹಾ ವಿಕಾಸ್ ಅಘಾಡಿಯ ಅಸಹಜ ಮೈತ್ರಿಯನ್ನು ತೊಡೆದುಕೊಳ್ಳಬೇಕು. ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗಿನ ಒಕ್ಕೂಟದಿಂದ ಹೊರನಡೆಯುವುದು ನಮ್ಮ ಪಕ್ಷ ಮತ್ತು ಕಾರ್ಯಕರ್ತರಿಗೆ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ನವೆಂಬರ್ 2019ರಲ್ಲಿ ಮಹಾ ವಿಕಾಸ್ ಅಘಾಡಿ ರಚನೆಯಾದಾಗಿನಿಂದ ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳಿಗೆ ಮಾತ್ರ ಅನುಕೂಲವಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ಸಾಮಾನ್ಯ ಶಿವಸೈನಿಕರು ತೊಂದರೆಗೆ ಈಡಾಗಿದ್ದಾರೆ. ಶಿವಸೈನಿಕರು ಮತ್ತು ಶಿವಸೇನೆಯ ಹಿತದೃಷ್ಟಿಯಿಂದ ಅಸಹಜ ಮೈತ್ರಿ ಕಡಿದುಕೊಳ್ಳುವುದು ಅವಶ್ಯವಾಗಿದೆ. ರಾಜ್ಯದ ಹಿತದೃಷ್ಟಿಯಿಂದಲೂ ಈ ನಿರ್ಧಾರ ಕೈಗೊಳ್ಳುವುದು ಮುಖ್ಯವಾಗಿದೆ ಎಂದು ಬಂಡಾಯ ಶಾಸಕರ ಜೊತೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿಂಧೆ ಟ್ವೀಟ್ ಮಾಡಿದ್ದಾರೆ.

#Hindutvaforever ಎಂಬ ಹ್ಯಾಷ್ ಟ್ಯಾಗ್ ಬಳಸಿ ಮರಾಠಿಯಲ್ಲಿ ಶಿಂಧೆ ಟ್ವೀಟ್ ಮಾಡಿದ್ದು, ಎಂವಿಎ ಒಕ್ಕೂಟದಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಬಲವಾಗುತ್ತಿದ್ದರೆ, ಶಿವಸೇನೆ ದುರ್ಬಲವಾಗುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಬಂಡಾಯ ಬಣದ ಒಬ್ಬ ಶಿವಸೇನೆ ಶಾಸಕ ಬಂದು ತಾನು ಮುಖ್ಯಮಂತ್ರಿಯಾಗಿ ಮುಂದುವರಿಯಲು ಅಸಮರ್ಥನೆಂದು ಹೇಳಿದರೆ ಸಿಎಂ ಸ್ಥಾನ ತ್ಯಜಿಸುವುದಾಗಿ ಎಂದು ಉದ್ಧವ್ ಠಾಕ್ರೆ ಅವರು ಹೇಳಿದ ಬೆನ್ನಲ್ಲೇ ಶಿಂಧೆ ಈ ಹೇಳಿಕೆ ನೀಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT