ಶಿವಸೇನೆ ಬಂಡಾಯ ಶಾಸಕರು 
ದೇಶ

'ಮಹಾ' ರಾಜಕೀಯ ಬಿಕ್ಕಟ್ಟು: 46 ಶಾಸಕರ ಬೆಂಬಲವಿದೆ ಎಂದ ಏಕನಾಥ್ ಶಿಂಧೆ, ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದ ಶಿವಸೇನೆ

ಜೂನ್ 21ರಂದು ಭುಗಿಲೆದ್ದ ಮಹಾರಾಷ್ಟ್ರ ರಾಜಕೀಯ ನಾಟಕದ ಕೇಂದ್ರಬಿಂದು ಈಗ ಗುವಾಹಟಿಗೆ ಸ್ಥಳಾಂತರಗೊಂಡಿದೆ. ಶಿವಸೇನೆಯ ಪ್ರಬಲ ವ್ಯಕ್ತಿ, ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಮೊದಲಿಗೆ ತಂಗಿದ್ದ ಸೂರತ್‌ನ ಲೆ ಮೆರಿಡಿಯನ್ ಹೋಟೆಲ್‌ನಿಂದ ಮಧ್ಯರಾತ್ರಿ ಗುವಾಹಟಿಗೆ

ಮುಂಬೈ: ಜೂನ್ 21ರಂದು ಭುಗಿಲೆದ್ದ ಮಹಾರಾಷ್ಟ್ರ ರಾಜಕೀಯ ನಾಟಕದ ಕೇಂದ್ರಬಿಂದು ಈಗ ಗುವಾಹಟಿಗೆ ಸ್ಥಳಾಂತರಗೊಂಡಿದೆ. ಶಿವಸೇನೆಯ ಪ್ರಬಲ ವ್ಯಕ್ತಿ, ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಮೊದಲಿಗೆ ತಂಗಿದ್ದ ಸೂರತ್‌ನ ಲೆ ಮೆರಿಡಿಯನ್ ಹೋಟೆಲ್‌ನಿಂದ ಮಧ್ಯರಾತ್ರಿ ಗುವಾಹಟಿಗೆ ಬಂಡಾಯ ಶಾಸಕರೊಂದಿಗೆ ತೆರಳಿದ್ದಾರೆ.

40 ಶಾಸಕರು ತಮ್ಮ ತೆಕ್ಕೆಯಲ್ಲಿ ಇದ್ದಾರೆ ಎಂದು ಹೇಳಿಕೊಳ್ಳುತ್ತಿರುವ ಶಿಂಧೆ ಅವರು ತಾವು ಶಿವಸೈನಿಕರಾಗೇ ಉಳಿದುಕೊಂಡು ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಬೇಕು ಎಂಬ ನಿಲುವಿಗೆ ಅಂಟಿಕೊಂಡಿದ್ದಾರೆ.

ಇದರ ಮಧ್ಯೆ ಶಿವಸೇನೆ ತನ್ನ ಪಕ್ಷದ ಶಾಸಕರಿಗೆ ಸೂಕ್ತ ಕಾರಣ ಮತ್ತು ಪೂರ್ವ ಮಾಹಿತಿ ಇಲ್ಲದೆ ಯಾರಾದರೂ ಇಂದು ನಡೆಯಲಿರುವ ಮಹತ್ವದ ಸಭೆಗೆ ಗೈರು ಹಾಜರಾದರೆ ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಅವರ ಸದಸ್ಯತ್ವ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪಕ್ಷದ ಮುಖ್ಯ ಸಚೇತಕರು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇಂದು ಸಂಜೆ ನಡೆಯಲಿರುವ ಮಹತ್ವದ ಸಭೆಗೆ ಹಾಜರಾಗುವಂತೆ ಶಿವಸೇನೆಯ ಮುಖ್ಯ ಸಚೇತಕರು ಪಕ್ಷದ ಎಲ್ಲ ಶಾಸಕರಿಗೆ ಪತ್ರ ಬರೆದಿದ್ದಾರೆ. ಯಾರಾದರೂ ಗೈರು ಹಾಜರಾದರೆ, ಶಾಸಕರು ಸ್ವಯಂಪ್ರೇರಿತರಾಗಿ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂದು ಪರಿಗಣಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಯವರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪುಟ ಸಭೆ ನಡೆಸುತ್ತಿದ್ದಾರೆ. ಈ ಸಭೆಗೆ 7 ಸಚಿವರು ಗೈರು ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT