ಶಿವಸೇನೆ ಬಂಡಾಯ ಶಾಸಕರು 
ದೇಶ

'ಮಹಾ' ರಾಜಕೀಯ ಬಿಕ್ಕಟ್ಟು: 46 ಶಾಸಕರ ಬೆಂಬಲವಿದೆ ಎಂದ ಏಕನಾಥ್ ಶಿಂಧೆ, ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದ ಶಿವಸೇನೆ

ಜೂನ್ 21ರಂದು ಭುಗಿಲೆದ್ದ ಮಹಾರಾಷ್ಟ್ರ ರಾಜಕೀಯ ನಾಟಕದ ಕೇಂದ್ರಬಿಂದು ಈಗ ಗುವಾಹಟಿಗೆ ಸ್ಥಳಾಂತರಗೊಂಡಿದೆ. ಶಿವಸೇನೆಯ ಪ್ರಬಲ ವ್ಯಕ್ತಿ, ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಮೊದಲಿಗೆ ತಂಗಿದ್ದ ಸೂರತ್‌ನ ಲೆ ಮೆರಿಡಿಯನ್ ಹೋಟೆಲ್‌ನಿಂದ ಮಧ್ಯರಾತ್ರಿ ಗುವಾಹಟಿಗೆ

ಮುಂಬೈ: ಜೂನ್ 21ರಂದು ಭುಗಿಲೆದ್ದ ಮಹಾರಾಷ್ಟ್ರ ರಾಜಕೀಯ ನಾಟಕದ ಕೇಂದ್ರಬಿಂದು ಈಗ ಗುವಾಹಟಿಗೆ ಸ್ಥಳಾಂತರಗೊಂಡಿದೆ. ಶಿವಸೇನೆಯ ಪ್ರಬಲ ವ್ಯಕ್ತಿ, ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಮೊದಲಿಗೆ ತಂಗಿದ್ದ ಸೂರತ್‌ನ ಲೆ ಮೆರಿಡಿಯನ್ ಹೋಟೆಲ್‌ನಿಂದ ಮಧ್ಯರಾತ್ರಿ ಗುವಾಹಟಿಗೆ ಬಂಡಾಯ ಶಾಸಕರೊಂದಿಗೆ ತೆರಳಿದ್ದಾರೆ.

40 ಶಾಸಕರು ತಮ್ಮ ತೆಕ್ಕೆಯಲ್ಲಿ ಇದ್ದಾರೆ ಎಂದು ಹೇಳಿಕೊಳ್ಳುತ್ತಿರುವ ಶಿಂಧೆ ಅವರು ತಾವು ಶಿವಸೈನಿಕರಾಗೇ ಉಳಿದುಕೊಂಡು ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಬೇಕು ಎಂಬ ನಿಲುವಿಗೆ ಅಂಟಿಕೊಂಡಿದ್ದಾರೆ.

ಇದರ ಮಧ್ಯೆ ಶಿವಸೇನೆ ತನ್ನ ಪಕ್ಷದ ಶಾಸಕರಿಗೆ ಸೂಕ್ತ ಕಾರಣ ಮತ್ತು ಪೂರ್ವ ಮಾಹಿತಿ ಇಲ್ಲದೆ ಯಾರಾದರೂ ಇಂದು ನಡೆಯಲಿರುವ ಮಹತ್ವದ ಸಭೆಗೆ ಗೈರು ಹಾಜರಾದರೆ ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಅವರ ಸದಸ್ಯತ್ವ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪಕ್ಷದ ಮುಖ್ಯ ಸಚೇತಕರು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇಂದು ಸಂಜೆ ನಡೆಯಲಿರುವ ಮಹತ್ವದ ಸಭೆಗೆ ಹಾಜರಾಗುವಂತೆ ಶಿವಸೇನೆಯ ಮುಖ್ಯ ಸಚೇತಕರು ಪಕ್ಷದ ಎಲ್ಲ ಶಾಸಕರಿಗೆ ಪತ್ರ ಬರೆದಿದ್ದಾರೆ. ಯಾರಾದರೂ ಗೈರು ಹಾಜರಾದರೆ, ಶಾಸಕರು ಸ್ವಯಂಪ್ರೇರಿತರಾಗಿ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂದು ಪರಿಗಣಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಯವರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪುಟ ಸಭೆ ನಡೆಸುತ್ತಿದ್ದಾರೆ. ಈ ಸಭೆಗೆ 7 ಸಚಿವರು ಗೈರು ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT