ಸೋನಿಯಾ ಗಾಂಧಿ 
ದೇಶ

ಇಡಿ ವಿಚಾರಣೆಗೆ ಮತ್ತೆ ಹೆಚ್ಚಿನ ಸಮಯಾವಕಾಶ ಕೇಳಿದ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ.

ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಇದೀಗ ಇನ್ನೂ ಹೆಚ್ಚಿನ ಸಮಯಾವಕಾಶಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆನ್ನಲಾಗಿದೆ.  ಸೋನಿಯಾ  ಗಾಂಧಿಯವರಿಗೆ ಕೋವಿಡ್ ದೃಢಪಟ್ಟ ನಂತರ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿದ್ದ ಅವರನ್ನು ಎರಡು ದಿನಗಳ ಹಿಂದೆ ಡಿಸ್ಚಾರ್ಜ್ ಮಾಡಲಾಗಿದೆ.

ಜೂನ್ 2 ರಂದು ಸೋನಿಯಾ ಗಾಂಧಿಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು.  ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಿದ್ದ ಅವರು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ (ED) ಹೆಚ್ಚಿನ ಸಮಯವನ್ನು ಕೋರಿದ್ದರು. ಬಳಿಕ

ಜೂನ್ 12 ರಂದು ಉಸಿರಾಟದ ತೊಂದರೆಯಿಂದ  ಅವರನ್ನು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆದ ನಂತರ 2 ದಿನದ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT