ಶರದ್ ಪವಾರ್ 
ದೇಶ

ಶಾಸಕರು ವಿಮಾನ ಹತ್ತುವವರೆಗೂ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು?: ಶರದ್ ಪವಾರ್ ಪ್ರಶ್ನೆ

ಶಿವಸೇನೆ ಬಂಡಾಯ ಶಾಸಕರು ವಿಮಾನ ಹತ್ತುವವರೆಗೂ ರಾಜ್ಯ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬೈ: ಶಿವಸೇನೆ ಬಂಡಾಯ ಶಾಸಕರು ವಿಮಾನ ಹತ್ತುವವರೆಗೂ ರಾಜ್ಯ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಸೇನೆ ಮುಖಂಡ ಏಕನಾಥ್ ಶಿಂಧೆ ನೇತೃತ್ವದ ಬಂಡಾಯಶಾಸಕರ ಗುಂಪು ಹಠಾತ್ ವಿಮಾನ ಹಾರಾಟ ನಡೆಸಿದ್ದು ಮಹಾರಾಷ್ಟ್ರ ಸರ್ಕಾರವನ್ನು ಪತನದ ಅಂಚಿಗೆ ತಂದಿದೆ. ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌ಗೆ ಸೋಮವಾರ ತಡರಾತ್ರಿ ಶಾಸಕರು ವಿಮಾನದಲ್ಲಿ ತೆರಳಿದ್ದಾರೆ. 22 ಶಾಸಕರ ಗುಂಪಿನ ಚಲನವಲನವು ಮುಂಬೈ ಪೊಲೀಸರ ಗಮನಕ್ಕೆ ಬಂದಿಲ್ಲವೇ ಎಂಬ ಪ್ರಶ್ನೆಗಳು ಎದ್ದಿವೆ, ಇದು ಮಹಾರಾಷ್ಟ್ರ ಸರ್ಕಾರಕ್ಕೆ, ನಿರ್ದಿಷ್ಟವಾಗಿ ಗೃಹ ಸಚಿವ ಹಾಗೂ ಎನ್‌ಸಿಪಿಯ ದಿಲೀಪ್ ವಾಲ್ಸೆ-ಪಾಟೀಲ್ ಅವರಿಗೆ ವರದಿ ಮಾಡಿದೆ ಎನ್ನಲಾಗಿದೆ.

ಶಾಸಕರ ಚಲನವಲನದ ಬಗ್ಗೆ ಸಚಿವರಿಗೆ ತಿಳಿದಿಲ್ಲವೇ, ಅವರ ಭದ್ರತಾ ವಿವರಗಳನ್ನು ಪೊಲೀಸರು ಒದಗಿಸಿದ್ದಾರೆಯೇ? ಎಂದು ಶರದ್ ಪವಾರ್ ಪ್ರಶ್ನಿಸಿದ್ದಾರೆ.

ಎರಡು ವರ್ಷಗಳ ಹಿಂದಿನ ಸಮ್ಮಿಶ್ರ ಸರ್ಕಾರದ ಐದನೇ ಹಂತದ ಬಿಕ್ಕಟ್ಟನ್ನು ಶಿವಸೇನೆಯ ಬಂಡಾಯ ಶಾಸಕರು ಆರಂಭಿಸುತ್ತಿದ್ದಂತೆಯೇ ಎನ್‌ಸಿಪಿ ನಾಯಕ ಶರದ್ ಪವಾರ್ ಅವರು ಪಕ್ಷದ ಇತರ ನಾಯಕರಲ್ಲದೆ ದಿಲೀಪ್ ವಾಲ್ಸೆ-ಪಾಟೀಲ್ ಮತ್ತು ಜಯಂತ್ ಪಾಟೀಲ್ ಅವರೊಂದಿಗೆ ಇಂದು ಬೆಳಿಗ್ಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಪವಾರ್ ಅವರು ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ರಾತ್ರಿಯ ಸಮಯದಲ್ಲಿ ಶಾಸಕರೊಂದಿಗೆ ವಿಮಾನದಲ್ಲಿ ಹೋಗುತ್ತಿರುವ ಕುರಿತು ಯಾವುದೇ ಗುಪ್ತಚರ ಮಾಹಿತಿ ಏಕೆ ಇರಲಿಲ್ಲ ಎಂದು ಪ್ರಶ್ನಿಸಿದರು.

ಅಂತೆಯೇ ಶಿಂಧೆಯವರ ಬಂಡಾಯ ಶಿವಸೇನೆಯ ಆಂತರಿಕ ಬಿಕ್ಕಟ್ಟಾಗಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅದನ್ನು ಪರಿಹರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT