ಏಕನಾಥ್ ಶಿಂಧೆ 
ದೇಶ

'ರಾಷ್ಟ್ರೀಯ ಪಕ್ಷ' ಎಲ್ಲ ರೀತಿಯ ಸಹಾಯದ ಭರವಸೆ ನೀಡಿದೆ: ಏಕನಾಥ್ ಶಿಂಧೆ

ಮಹಾರಾಷ್ಟ್ರ ರಾಜಕೀಯ ಸಂಘರ್ಷ ಮುಂದುವರೆದಿರುವಂತೆಯೇ ಬಂಡಾಯ ಶಾಸಕರ ಬಣಕ್ಕೆ 'ರಾಷ್ಟ್ರೀಯ ಪಕ್ಷ'ವೊಂದು ಎಲ್ಲ ರೀತಿಯ ಸಹಾಯದ ಭರವಸೆ ನೀಡಿದೆ ಎಂದು ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ.

ಮುಂಬೈ: ಮಹಾರಾಷ್ಟ್ರ ರಾಜಕೀಯ ಸಂಘರ್ಷ ಮುಂದುವರೆದಿರುವಂತೆಯೇ ಬಂಡಾಯ ಶಾಸಕರ ಬಣಕ್ಕೆ 'ರಾಷ್ಟ್ರೀಯ ಪಕ್ಷ'ವೊಂದು ಎಲ್ಲ ರೀತಿಯ ಸಹಾಯದ ಭರವಸೆ ನೀಡಿದೆ ಎಂದು ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ.

ತಮ್ಮದೇ ಆಡಳಿತಾ ರೂಢ ಶಿವಸೇನೆ ಪಕ್ಷದ ವಿರುದ್ಧ ಬಂಡಾಯವೆದ್ದು ಮೂರು ಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಪತನದ ಅಂಚಿಗೆ ತಳ್ಳಿರುವ ಶಿವಸೇನಾ ನಾಯಕ ಏಕನಾಥ್ ಶಿಂಧೆ, ‘ರಾಷ್ಟ್ರೀಯ ಪಕ್ಷ’ವೊಂದು ತಮ್ಮ ಬಂಡಾಯವನ್ನು ‘ಐತಿಹಾಸಿಕ’ ಎಂದು ಬಣ್ಣಿಸಿದೆ ಮತ್ತು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದೆ ಎಂದು ಹೇಳಿದ್ದಾರೆ.

ಗುವಾಹಟಿಯ ಹೋಟೆಲ್‌ನಲ್ಲಿ ಬಂಡಾಯ ಶಾಸಕರ ಗುಂಪನ್ನು ಉದ್ದೇಶಿಸಿ ಶಿಂಧೆ ಮಾತನಾಡುತ್ತಿರುವ ವಿಡಿಯೋವನ್ನು ಮುಂಬೈನಲ್ಲಿರುವ ಅವರ ಕಚೇರಿ ಬಿಡುಗಡೆ ಮಾಡಿದ್ದು, ಶಾಸಕರು ತಮ್ಮ ಗುಂಪಿನ ನಾಯಕರಾಗಿ ತಮ್ಮ ಪರವಾಗಿ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲು ಶಿಂಧೆ ಅವರಿಗೆ ಸರ್ವಾನುಮತದಿಂದ ಅಧಿಕಾರ ನೀಡಿದ್ದಾರೆ ಎಂದು ವೀಡಿಯೊ ಹೇಳಲಾಗಿದೆ. ಆದಾಗ್ಯೂ, ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರು ಶಿಂಧೆ ಬದಲಿಗೆ ಅಜಯ್ ಚೌಧರಿ ಅವರನ್ನು ಸದನದಲ್ಲಿ ಶಿವಸೇನೆ ಗುಂಪಿನ ನಾಯಕರಾಗಿ ನೇಮಿಸಲು ಈ ಹಿಂದೆ ಅನುಮೋದನೆ ನೀಡಿದ್ದಾರೆ.

ವೀಡಿಯೋದಲ್ಲಿ ಶಿಂಧೆ, "ನಮ್ಮ ಚಿಂತೆ ಮತ್ತು ಸಂತೋಷ ಒಂದೇ. ನಾವು ಒಗ್ಗಟ್ಟಾಗಿದ್ದೇವೆ ಮತ್ತು ಗೆಲುವು ನಮ್ಮದೇ ಆಗಿರುತ್ತದೆ. ಒಂದು ರಾಷ್ಟ್ರೀಯ ಪಕ್ಷವಿದೆ, 'ಮಹಾಶಕ್ತಿ' ಇದೆ, ಅವರು ಪಾಕಿಸ್ತಾನವನ್ನು ಸೋಲಿಸಿದರು ಎಂದು ನಿಮಗೆ ತಿಳಿದಿದೆ, ಆ ಪಕ್ಷವು ನಮಗೆ ಎಲ್ಲ ರೀತಿಯ ನೆರವು ಘೋಷಣೆ ಮಾಡಿದೆ. ನಾವು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಲ್ಲಾ ಸಹಾಯವನ್ನು ಒದಗಿಸುವುದಾಗಿ ಭರವಸೆ ನೀಡಿದೆ ಎಂದು  ಹೇಳಿದ್ದಾರೆ.

ಶಿಂಧೆ ಪ್ರಸ್ತುತ ಗುವಾಹಟಿಯಲ್ಲಿ ಶಿವಸೇನೆಯ 37 ಬಂಡಾಯ ಶಾಸಕರು ಮತ್ತು ಒಂಬತ್ತು ಸ್ವತಂತ್ರ ಶಾಸಕರೊಂದಿಗೆ ಬೀಡುಬಿಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel