ಸಂಗ್ರಹ ಚಿತ್ರ 
ದೇಶ

'ಮಹಾ' ಸಂಘರ್ಷ; ಏಕನಾಥ್ ಶಿಂಧೆ ಸೇರಿ 12 ರೆಬೆಲ್ ಶಾಸಕರ ಅನರ್ಹತೆಗೆ ಶಿವಸೇನೆ ಅರ್ಜಿ

ಮಹಾರಾಷ್ಟ್ರದಲ್ಲಿ ಭುಗಿಲೆದ್ದಿರುವ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಇದೀಗೆ ರೆಬೆಲ್ ಶಾಸಕರನ್ನು ಹಣಿಯಲು ಸಿಎಂ ಉದ್ಧವ್ ಠಾಕ್ರೆ ಬಣ ಶಾಸಕತ್ವ ಅನರ್ಹತೆ ಬಾಣ ಹೂಡಿದ್ದು, ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ಸೇರಿದಂತೆ 12 ರೆಬೆಲ್ ಶಾಸಕರ ಅನರ್ಹತೆಗೆ ಶಿವಸೇನೆ ಮನವಿ ಮಾಡಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಭುಗಿಲೆದ್ದಿರುವ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಇದೀಗೆ ರೆಬೆಲ್ ಶಾಸಕರನ್ನು ಹಣಿಯಲು ಸಿಎಂ ಉದ್ಧವ್ ಠಾಕ್ರೆ ಬಣ ಶಾಸಕತ್ವ ಅನರ್ಹತೆ ಬಾಣ ಹೂಡಿದ್ದು, ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ಸೇರಿದಂತೆ 12 ರೆಬೆಲ್ ಶಾಸಕರ ಅನರ್ಹತೆಗೆ ಶಿವಸೇನೆ ಮನವಿ ಮಾಡಿದೆ.

ಮೂಲಗಳ ಪ್ರಕಾರ ಪ್ರಸ್ತುತ ರೆಬೆಲ್ ಶಾಸಕರ ನಾಯಕತ್ವ ವಹಿಸಿರುವ ಏಕನಾಥ್ ಶಿಂಧೆ ಸೇರಿದಂತೆ ಅವರ ಬಣದಲ್ಲಿರುವ 12 ಶಾಸಕರನ್ನು ಅನರ್ಹಗೊಳಿಸುವಂತೆ  ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ನಾಯಕರು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಉಪಸಭಾಪತಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಶಿವಸೇನೆ ಪಕ್ಷದ ಸಂಸದ ಅರವಿಂದ್ ಸಾವಂತ್ ಅವರು, 'ನಾವು ಡೆಪ್ಯೂಟಿ ಸ್ಪೀಕರ್ ಮುಂದೆ ಮನವಿ ಸಲ್ಲಿಸಿದ್ದೇವೆ ಮತ್ತು ಏಕನಾಥ್ ಶಿಂಧೆ ಸೇರಿದಂತೆ 12 ಶಾಸಕರು ನಿನ್ನೆಯ ಶಾಸಕಾಂಗ ಸಭೆಗೆ ಹಾಜರಾಗದ ಕಾರಣ ಅವರ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ.

ಸಭೆಗೂ ಮುನ್ನ ನೋಟಿಸ್ ನೀಡಲಾಗಿದ್ದು, ಸಭೆಗೆ ಹಾಜರಾಗದಿದ್ದರೆ ಸಂವಿಧಾನದ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿತ್ತು. ಅದಾಗ್ಯೂ ಬಂಡಾಯ ಶಾಸಕರು ಹಾಜರಾಗಿಲ್ಲ. ಕೆಲವರು ಬರಲಿಲ್ಲ, ಇನ್ನು ಕೆಲವರು ಅನಗತ್ಯ ಕಾರಣಗಳನ್ನು ಕೊಟ್ಟಿದ್ದಾರೆ ಎಂದು ಸಾವಂತ್ ಹೇಳಿದ್ದಾರೆ.

ಅನರ್ಹತೆಗೆ ಪ್ರಸ್ತಾವನೆ ಸಲ್ಲಿಸಿರುವ 12 ಶಾಸಕರ ಪಟ್ಟಿಯಲ್ಲಿ ಏಕನಾಥ್ ಶಿಂಧೆ, ಪ್ರಕಾಶ್ ಸುರ್ವೆ, ತಾನಾಜಿ ಸಾವಂತ್, ಮಹೇಶ್ ಶಿಂಧೆ, ಅಬ್ದುಲ್ ಸತ್ತಾರ್, ಸಂದೀಪ್ ಭೂಮಾರೆ, ಭರತ್ ಗೊಗವಾಲೆ, ಸಂಜಯ್ ಶಿರ್ಸಾತ್, ಯಾಮಿನಿ ಯಾದವ್, ಅನಿಲ್ ಬಾಬರ್, ಬಾಲಾಜಿ ದೇವದಾಸ್ ಮತ್ತು ಲತಾ ಚೌಧರಿ ಅವರ ಹೆಸರುಗಳಿವೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT