ಸಂಗ್ರಹ ಚಿತ್ರ 
ದೇಶ

'ಮಹಾ' ಸಂಘರ್ಷ; ಏಕನಾಥ್ ಶಿಂಧೆ ಸೇರಿ 12 ರೆಬೆಲ್ ಶಾಸಕರ ಅನರ್ಹತೆಗೆ ಶಿವಸೇನೆ ಅರ್ಜಿ

ಮಹಾರಾಷ್ಟ್ರದಲ್ಲಿ ಭುಗಿಲೆದ್ದಿರುವ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಇದೀಗೆ ರೆಬೆಲ್ ಶಾಸಕರನ್ನು ಹಣಿಯಲು ಸಿಎಂ ಉದ್ಧವ್ ಠಾಕ್ರೆ ಬಣ ಶಾಸಕತ್ವ ಅನರ್ಹತೆ ಬಾಣ ಹೂಡಿದ್ದು, ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ಸೇರಿದಂತೆ 12 ರೆಬೆಲ್ ಶಾಸಕರ ಅನರ್ಹತೆಗೆ ಶಿವಸೇನೆ ಮನವಿ ಮಾಡಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಭುಗಿಲೆದ್ದಿರುವ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಇದೀಗೆ ರೆಬೆಲ್ ಶಾಸಕರನ್ನು ಹಣಿಯಲು ಸಿಎಂ ಉದ್ಧವ್ ಠಾಕ್ರೆ ಬಣ ಶಾಸಕತ್ವ ಅನರ್ಹತೆ ಬಾಣ ಹೂಡಿದ್ದು, ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ಸೇರಿದಂತೆ 12 ರೆಬೆಲ್ ಶಾಸಕರ ಅನರ್ಹತೆಗೆ ಶಿವಸೇನೆ ಮನವಿ ಮಾಡಿದೆ.

ಮೂಲಗಳ ಪ್ರಕಾರ ಪ್ರಸ್ತುತ ರೆಬೆಲ್ ಶಾಸಕರ ನಾಯಕತ್ವ ವಹಿಸಿರುವ ಏಕನಾಥ್ ಶಿಂಧೆ ಸೇರಿದಂತೆ ಅವರ ಬಣದಲ್ಲಿರುವ 12 ಶಾಸಕರನ್ನು ಅನರ್ಹಗೊಳಿಸುವಂತೆ  ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ನಾಯಕರು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಉಪಸಭಾಪತಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಶಿವಸೇನೆ ಪಕ್ಷದ ಸಂಸದ ಅರವಿಂದ್ ಸಾವಂತ್ ಅವರು, 'ನಾವು ಡೆಪ್ಯೂಟಿ ಸ್ಪೀಕರ್ ಮುಂದೆ ಮನವಿ ಸಲ್ಲಿಸಿದ್ದೇವೆ ಮತ್ತು ಏಕನಾಥ್ ಶಿಂಧೆ ಸೇರಿದಂತೆ 12 ಶಾಸಕರು ನಿನ್ನೆಯ ಶಾಸಕಾಂಗ ಸಭೆಗೆ ಹಾಜರಾಗದ ಕಾರಣ ಅವರ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ.

ಸಭೆಗೂ ಮುನ್ನ ನೋಟಿಸ್ ನೀಡಲಾಗಿದ್ದು, ಸಭೆಗೆ ಹಾಜರಾಗದಿದ್ದರೆ ಸಂವಿಧಾನದ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿತ್ತು. ಅದಾಗ್ಯೂ ಬಂಡಾಯ ಶಾಸಕರು ಹಾಜರಾಗಿಲ್ಲ. ಕೆಲವರು ಬರಲಿಲ್ಲ, ಇನ್ನು ಕೆಲವರು ಅನಗತ್ಯ ಕಾರಣಗಳನ್ನು ಕೊಟ್ಟಿದ್ದಾರೆ ಎಂದು ಸಾವಂತ್ ಹೇಳಿದ್ದಾರೆ.

ಅನರ್ಹತೆಗೆ ಪ್ರಸ್ತಾವನೆ ಸಲ್ಲಿಸಿರುವ 12 ಶಾಸಕರ ಪಟ್ಟಿಯಲ್ಲಿ ಏಕನಾಥ್ ಶಿಂಧೆ, ಪ್ರಕಾಶ್ ಸುರ್ವೆ, ತಾನಾಜಿ ಸಾವಂತ್, ಮಹೇಶ್ ಶಿಂಧೆ, ಅಬ್ದುಲ್ ಸತ್ತಾರ್, ಸಂದೀಪ್ ಭೂಮಾರೆ, ಭರತ್ ಗೊಗವಾಲೆ, ಸಂಜಯ್ ಶಿರ್ಸಾತ್, ಯಾಮಿನಿ ಯಾದವ್, ಅನಿಲ್ ಬಾಬರ್, ಬಾಲಾಜಿ ದೇವದಾಸ್ ಮತ್ತು ಲತಾ ಚೌಧರಿ ಅವರ ಹೆಸರುಗಳಿವೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT