ಶಿವಸೇನೆ ಬಂಡಾಯ ಶಾಸಕರು 
ದೇಶ

'ಮಹಾ' ಸಂಘರ್ಷ; ರೆಬೆಲ್ ಶಾಸಕರ ಅನರ್ಹತೆಗೆ ಮನವಿ ಸಲ್ಲಿಕೆಗೆ ಠಾಕ್ರೆ ಬಣದ ಸಿದ್ಧತೆ

ಮಹಾರಾಷ್ಟ್ರದಲ್ಲಿ ಭುಗಿಲೆದ್ದಿರುವ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಇದೀಗೆ ರೆಬೆಲ್ ಶಾಸಕರನ್ನು ಹಣಿಯಲು ಸಿಎಂ ಉದ್ಧವ್ ಠಾಕ್ರೆ ಬಣ ಶಾಸಕತ್ವ ಅನರ್ಹತೆ ಬಾಣ ಹೂಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಭುಗಿಲೆದ್ದಿರುವ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಇದೀಗೆ ರೆಬೆಲ್ ಶಾಸಕರನ್ನು ಹಣಿಯಲು ಸಿಎಂ ಉದ್ಧವ್ ಠಾಕ್ರೆ ಬಣ ಶಾಸಕತ್ವ ಅನರ್ಹತೆ ಬಾಣ ಹೂಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಪ್ರಸ್ತುತ ರೆಬೆಲ್ ಶಾಸಕರ ನಾಯಕತ್ವ ವಹಿಸಿರುವ ಏಕನಾಥ್ ಶಿಂಡೆ ಅವರ ಬಣದಲ್ಲಿರುವ 15 ಶಾಸಕರನ್ನು ಅನರ್ಹಗೊಳಿಸುವಂತೆ ಮನವಿ ಮಾಡಲು ಉದ್ಧವ್ ಠಾಕ್ರೆ ಬಣ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ರೆಬೆಲ್ ಬಣದಲ್ಲಿ ಗುರುತಿಸಿಕೊಂಡಿರುವ ಸುಮಾರು 15 ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಮಹಾರಾಷ್ಟ್ರ ವಿಧಾನಸಭೆ ಉಪಸಭಾಪತಿಗೆ ಶಿವಸೇನೆ ಮನವಿ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ. 

ಇಂದೇ ಅನರ್ಹತೆ ಅರ್ಜಿ ಸಲ್ಲಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರದ ಕಾನೂನು ತಂಡದ ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಆಡಳಿತಾರೂಢ ಶಿವಸೇನೆ ಪಕ್ಷ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಇದಕ್ಕೆ ಇಂಬು ನೀಡುವಂತೆ ಇತ್ತ ಶಿವಸೇನೆ ವಕ್ತಾರ ಸಂಜಯ್ ರಾವತ್ ಅವರು ಬಂಡಾಯ ಶಾಸಕರಿಗೆ 24 ಗಂಟೆಗಳ ಗಡುವು ನೀಡಿ ಮುಂಬೈಗೆ ವಾಪಸ್ ಆಗುವಂತೆ ಎಚ್ಚರಿಕೆ ನೀಡಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT