ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸ 'ವರ್ಷ'ದಿಂದ ನಿರ್ಗಮಿಸಿದ ನಂತರ ಅವರ ಖಾಸಗಿ ನಿವಾಸ 'ಮಾತೋಶ್ರೀ' ಹೊರಗೆ ಜಮಾಯಿಸಿದ ಬೆಂಬಲಿಗರನ್ನು ಸ್ವಾಗತಿಸಿದರು 
ದೇಶ

ಮಹಾರಾಷ್ಟ್ರ ಸರ್ಕಾರ ಕಗ್ಗಂಟು: ಸಿಎಂ ಉದ್ಧವ್ ಗೆ ಮತ್ತಷ್ಟು ಸಂಕಷ್ಟ, ಮತ್ತೆ ಮೂವರು ಶಿವಸೇನೆ ಶಾಸಕರು ಶಿಂಧೆ ಬಣಕ್ಕೆ, ಫಡ್ನವೀಸ್ ನೇತೃತ್ವದಲ್ಲಿ ಬಿಜೆಪಿ ತಂತ್ರ!

ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಇತ್ತ ಸರ್ಕಾರ ಉಳಿಸಲು ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆ ನಾಯಕರು, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದರೆ ಮತ್ತೊಂದೆಡೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮುಂಬೈಯಲ್ಲಿರುವ ಅವರ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ, ತಂತ್ರಗಾರಿಕೆ ಮುಂದುವರಿದಿದೆ. 

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಇತ್ತ ಸರ್ಕಾರ ಉಳಿಸಲು ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆ ನಾಯಕರು, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದರೆ ಮತ್ತೊಂದೆಡೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮುಂಬೈಯಲ್ಲಿರುವ ಅವರ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ, ತಂತ್ರಗಾರಿಕೆ ಮುಂದುವರಿದಿದೆ. 

ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು ಏಕನಾಥ್ ಶಿಂಧೆ ಬಂಡಾಯ ಬಣವನ್ನು ತೆಕ್ಕೆಗೆ ಎಳೆದುಕೊಳ್ಳಲು ನೋಡುತ್ತಿದೆ ಎಂದು ತಿಳಿದುಬಂದಿದೆ.

ಇಂದು ಮತ್ತೆ ಮೂವರು ಶಾಸಕರು ಬಂಡಾಯ ಗುಂಪಿಗೆ: ಮಹಾ ವಿಕಾಸ ಅಘಾಡಿ(MVA) ಸರ್ಕಾರದ ಮೂವರು ಶಿವಸೇನೆ ಶಾಸಕರು ಅಸ್ಸಾಂನ ಗುವಾಹಟಿಗೆ ತೆರಳಿ ಸಚಿವ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಗುಂಪನ್ನು ಸೇರಿಕೊಂಡಿದೆ.

ದೀಪಕ್ ಕೇಸಕರ್ (ಸಾವಂತವಾಡಿಯಿಂದ ಶಾಸಕ), ಮಂಗೇಶ್ ಕುಡಾಲ್ಕರ್ (ಚೆಂಬೂರ್) ಮತ್ತು ಸದಾ ಸರ್ವಾಂಕರ್ (ದಾದರ್) ಅವರು ಮುಂಬೈನಿಂದ ಗುವಾಹಟಿಗೆ ಬೆಳಿಗ್ಗೆ ವಿಮಾನದಲ್ಲಿ ತೆರಳಿದರು ಎಂದು ಶಿಂಧೆ ಅವರ ನಿಕಟವರ್ತಿ ಹೇಳಿದ್ದಾರೆ. ನಿನ್ನೆ ಸಂಜೆ ಮಹಾರಾಷ್ಟ್ರ ಸಚಿವ ಗುಲಾಬ್ರಾವ್ ಪಾಟೀಲ್ ಸೇರಿದಂತೆ ನಾಲ್ವರು ಶಾಸಕರು ಗುವಾಹಟಿಗೆ ತೆರಳಿದ್ದರು.

ಶಿಂಧೆ ಅವರು ಶಾಸಕರೊಂದಿಗೆ ಸಮಾಲೋಚಿಸಿ ನಂತರ ಮುಂಬೈಗೆ ಯಾವಾಗ ಮರಳಬೇಕು ಎಂದು ನಿರ್ಧರಿಸುತ್ತಾರೆ ಎಂದು ಅವರ ಸಹಚರರು ತಿಳಿಸಿದ್ದಾರೆ. ಇತ್ತ ತಂದೆ ಬಾಳಾಸಾಹೇಬ್ ಠಾಕ್ರೆ ಕಟ್ಟಿದ ಶಿವಸೇನೆಯಲ್ಲಿ ಸಿಎಂ ಉದ್ಧವ್ ಠಾಕ್ರೆ ಬಲ ಕುಗ್ಗುತ್ತದೆಯೇ ಎಂಬ ಸಂದೇಹ ಉಂಟಾಗುತ್ತಿದೆ. ಏಕನಾಥ್ ಶಿಂಧೆ ಬಲ ಮತ್ತಷ್ಟು ಹೆಚ್ಚುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT