ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸ 'ವರ್ಷ'ದಿಂದ ನಿರ್ಗಮಿಸಿದ ನಂತರ ಅವರ ಖಾಸಗಿ ನಿವಾಸ 'ಮಾತೋಶ್ರೀ' ಹೊರಗೆ ಜಮಾಯಿಸಿದ ಬೆಂಬಲಿಗರನ್ನು ಸ್ವಾಗತಿಸಿದರು 
ದೇಶ

ಮಹಾರಾಷ್ಟ್ರ ಸರ್ಕಾರ ಕಗ್ಗಂಟು: ಸಿಎಂ ಉದ್ಧವ್ ಗೆ ಮತ್ತಷ್ಟು ಸಂಕಷ್ಟ, ಮತ್ತೆ ಮೂವರು ಶಿವಸೇನೆ ಶಾಸಕರು ಶಿಂಧೆ ಬಣಕ್ಕೆ, ಫಡ್ನವೀಸ್ ನೇತೃತ್ವದಲ್ಲಿ ಬಿಜೆಪಿ ತಂತ್ರ!

ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಇತ್ತ ಸರ್ಕಾರ ಉಳಿಸಲು ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆ ನಾಯಕರು, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದರೆ ಮತ್ತೊಂದೆಡೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮುಂಬೈಯಲ್ಲಿರುವ ಅವರ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ, ತಂತ್ರಗಾರಿಕೆ ಮುಂದುವರಿದಿದೆ. 

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಇತ್ತ ಸರ್ಕಾರ ಉಳಿಸಲು ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆ ನಾಯಕರು, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದರೆ ಮತ್ತೊಂದೆಡೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮುಂಬೈಯಲ್ಲಿರುವ ಅವರ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ, ತಂತ್ರಗಾರಿಕೆ ಮುಂದುವರಿದಿದೆ. 

ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು ಏಕನಾಥ್ ಶಿಂಧೆ ಬಂಡಾಯ ಬಣವನ್ನು ತೆಕ್ಕೆಗೆ ಎಳೆದುಕೊಳ್ಳಲು ನೋಡುತ್ತಿದೆ ಎಂದು ತಿಳಿದುಬಂದಿದೆ.

ಇಂದು ಮತ್ತೆ ಮೂವರು ಶಾಸಕರು ಬಂಡಾಯ ಗುಂಪಿಗೆ: ಮಹಾ ವಿಕಾಸ ಅಘಾಡಿ(MVA) ಸರ್ಕಾರದ ಮೂವರು ಶಿವಸೇನೆ ಶಾಸಕರು ಅಸ್ಸಾಂನ ಗುವಾಹಟಿಗೆ ತೆರಳಿ ಸಚಿವ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಗುಂಪನ್ನು ಸೇರಿಕೊಂಡಿದೆ.

ದೀಪಕ್ ಕೇಸಕರ್ (ಸಾವಂತವಾಡಿಯಿಂದ ಶಾಸಕ), ಮಂಗೇಶ್ ಕುಡಾಲ್ಕರ್ (ಚೆಂಬೂರ್) ಮತ್ತು ಸದಾ ಸರ್ವಾಂಕರ್ (ದಾದರ್) ಅವರು ಮುಂಬೈನಿಂದ ಗುವಾಹಟಿಗೆ ಬೆಳಿಗ್ಗೆ ವಿಮಾನದಲ್ಲಿ ತೆರಳಿದರು ಎಂದು ಶಿಂಧೆ ಅವರ ನಿಕಟವರ್ತಿ ಹೇಳಿದ್ದಾರೆ. ನಿನ್ನೆ ಸಂಜೆ ಮಹಾರಾಷ್ಟ್ರ ಸಚಿವ ಗುಲಾಬ್ರಾವ್ ಪಾಟೀಲ್ ಸೇರಿದಂತೆ ನಾಲ್ವರು ಶಾಸಕರು ಗುವಾಹಟಿಗೆ ತೆರಳಿದ್ದರು.

ಶಿಂಧೆ ಅವರು ಶಾಸಕರೊಂದಿಗೆ ಸಮಾಲೋಚಿಸಿ ನಂತರ ಮುಂಬೈಗೆ ಯಾವಾಗ ಮರಳಬೇಕು ಎಂದು ನಿರ್ಧರಿಸುತ್ತಾರೆ ಎಂದು ಅವರ ಸಹಚರರು ತಿಳಿಸಿದ್ದಾರೆ. ಇತ್ತ ತಂದೆ ಬಾಳಾಸಾಹೇಬ್ ಠಾಕ್ರೆ ಕಟ್ಟಿದ ಶಿವಸೇನೆಯಲ್ಲಿ ಸಿಎಂ ಉದ್ಧವ್ ಠಾಕ್ರೆ ಬಲ ಕುಗ್ಗುತ್ತದೆಯೇ ಎಂಬ ಸಂದೇಹ ಉಂಟಾಗುತ್ತಿದೆ. ಏಕನಾಥ್ ಶಿಂಧೆ ಬಲ ಮತ್ತಷ್ಟು ಹೆಚ್ಚುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT