ದ್ರೌಪದಿ ಮುರ್ಮು 
ದೇಶ

ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ: ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಕೆ

ಮುಂದಿನ ತಿಂಗಳು ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು ಇಂದು ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

ನವದೆಹಲಿ: ಮುಂದಿನ ತಿಂಗಳು ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು ಇಂದು ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳ ಮುಂದೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಎನ್ ಡಿ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ನಿನ್ನೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಅವರ ಉಮೇದುವಾರಿಕೆಯ ದೇಶಾದ್ಯಂತ ಜನರು ವಿವಿಧ ರೀತಿಯಲ್ಲಿ ಚರ್ಚೆ ನಡೆಸುತ್ತಿದ್ದಾರೆ. 

ನಿನ್ನೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಇಂದು ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದೆ. ಅವರ ಉಮೇದುವಾರಿಕೆಯ ಬಗ್ಗೆ ಭಾರತದಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಳಮಟ್ಟದ ಸಮಸ್ಯೆಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಭಾರತದ ಅಭಿವೃದ್ಧಿಯ ದೃಷ್ಟಿಕೋನ ಅತ್ಯುತ್ತಮವಾಗಿದೆ ಎಂದು ಹೇಳಿದ್ದಾರೆ.

ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ದೇಶದ ಬುಡಕಟ್ಟು ಜನಾಂಗದ ಮೊದಲ ಮಹಿಳಾ ರಾಷ್ಟ್ರಪತಿ ಹಾಗೂ ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಳ್ಳಲಿದ್ದಾರೆ. ಈ ಮೊದಲು ಯುಪಿಎ ಮೈತ್ರಿಕೂಟದ ಸರ್ಕಾರವಿದ್ದಾಗ ಪ್ರತಿಭಾ ಪಾಟೀಲ್ ರಾಷ್ಟ್ರಪತಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT