ತಪನ್ ಕುಮಾರ್ ದೇಕಾ 
ದೇಶ

ಗುಪ್ತಚರ ಇಲಾಖೆ ಮುಖ್ಯಸ್ಥರಾಗಿ ತಪನ್ ಕುಮಾರ್ ದೇಕಾ ನೇಮಕ; ರಾ ಮುಖ್ಯಸ್ಥ ಗೋಯಲ್ ಅಧಿಕಾರಾವಧಿ 1 ವರ್ಷ ವಿಸ್ತರಣೆ!

ಹಿರಿಯ ಐಪಿಎಸ್‌ ಅಧಿಕಾರಿ ತಪನ್‌ ಕುಮಾರ್‌ ದೇಕಾ ಅವರನ್ನು ಗುಪ್ತಚರ ಸಂಸ್ಥೆ (ಐಬಿ) ಮುಖ್ಯಸ್ಥರನ್ನಾಗಿ ಶುಕ್ರವಾರ ನೇಮಿಸಲಾಗಿದ್ದು, ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ) ಮುಖ್ಯಸ್ಥ ಸಮಂತ್‌ ಕುಮಾರ್‌ ಗೋಯೆಲ್‌ ಅವರಿಗೆ ಒಂದು ವರ್ಷದ ಸೇವಾ ಅವಧಿ ವಿಸ್ತರಣೆಯಾಗಿದೆ.

ನವದೆಹಲಿ: ಹಿರಿಯ ಐಪಿಎಸ್‌ ಅಧಿಕಾರಿ ತಪನ್‌ ಕುಮಾರ್‌ ದೇಕಾ ಅವರನ್ನು ಗುಪ್ತಚರ ಸಂಸ್ಥೆ (ಐಬಿ) ಮುಖ್ಯಸ್ಥರನ್ನಾಗಿ ಶುಕ್ರವಾರ ನೇಮಿಸಲಾಗಿದ್ದು, ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ) ಮುಖ್ಯಸ್ಥ ಸಮಂತ್‌ ಕುಮಾರ್‌ ಗೋಯೆಲ್‌ ಅವರಿಗೆ ಒಂದು ವರ್ಷದ ಸೇವಾ ಅವಧಿ ವಿಸ್ತರಣೆಯಾಗಿದೆ.

1988 ರ ಬ್ಯಾಚ್ ಹಿಮಾಚಲ ಪ್ರದೇಶ ಕೇಡರ್ ಅಧಿಕಾರಿ ಮತ್ತು ಈಶಾನ್ಯ ವ್ಯವಹಾರಗಳ ಪರಿಣಿತರಾದ ತಪನ್ ಕುಮಾರ್ ದೇಕಾ ಪ್ರಸ್ತುತ ಗುಪ್ತಚರ ಇಲಾಖೆಯ ಕಾರ್ಯಾಚರಣೆಯ ವಿಭಾಗದ ಮುಖ್ಯಸ್ಥರಾಗಿದ್ದು, ಕಳೆದ ಎರಡು ದಶಕಗಳಿಂದ ಭಯೋತ್ಪಾದಕರು ಮತ್ತು ಧಾರ್ಮಿಕ ಮೂಲಭೂತವಾದವನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

ಈ ಕುರಿತು ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯ ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದ್ದು, 'ಸಚಿವ ಸಂಪುಟದ ನೇಮಕಾತಿ ಸಮಿತಿಯು 30.06.2022 ರಂದು ಎರಡು ವರ್ಷಗಳ ಅವಧಿಗೆ ಅವರ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ, ಗುಪ್ತಚರ ಬ್ಯೂರೋದ ವಿಶೇಷ ನಿರ್ದೇಶಕರಾದ ತಪನ್ ಕುಮಾರ್ ದೇಕಾ ಅವರನ್ನು ಇಂಟೆಲಿಜೆನ್ಸ್ ಬ್ಯೂರೋ ನಿರ್ದೇಶರಾಗಿ ಮತ್ತು ಉಪ ನಿರ್ದೇಶಕರಾಗಿ  ಅರವಿಂದ ಕುಮಾರ್ IPS ಅವರನ್ನು ನೇಮಕ ಮಾಡಲು ಅನುಮೋದನೆ ನೀಡಿದೆ ಎಂದು  ತಿಳಿಸಿದೆ.

ಇನ್ನು ಪಂಜಾಬ್ ಕೇಡರ್‌ನ 1984 ರ ಬ್ಯಾಚ್ IPS ಅಧಿಕಾರಿ ಮತ್ತು ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ) (RAW) ಮುಖ್ಯಸ್ಥ ಸಮಂತ್‌ ಕುಮಾರ್‌ ಗೋಯೆಲ್‌ ಅವರ ಸೇವಾವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡಲಾಗಿದ್ದು, ಇದು ಅವರ ಎರಡನೇ ವಿಸ್ತರಣೆಯಾಗಿದೆ.

"ಸಮಂತ್ ಕುಮಾರ್ ಗೋಯೆಲ್, IPS (PB:84) ಅವರ ಪ್ರಸ್ತುತ ಅಧಿಕಾರಾವಧಿಯನ್ನು ಮೀರಿ ಒಂದು ವರ್ಷದ ಅವಧಿಗೆ ಅಂದರೆ 30.06.2023 ರವರೆಗೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ಕಾರ್ಯದರ್ಶಿಯಾಗಿ ಸೇವೆಯ ವಿಸ್ತರಣೆಯನ್ನು ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ" ಎಂದು  ತಿಳಿದುಬಂದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT