ಸಾವಿಗೀಡಾದ ಐಎಎಸ್ ಅಧಿಕಾರಿಯ ಪುತ್ರ ಹಾಗೂ ಅವರ ತಂದೆಯ ಚಿತ್ರ 
ದೇಶ

ಪಂಜಾಬ್: ಗುಂಡು ಹಾರಿಸಿಕೊಂಡು ಐಎಎಸ್ ಅಧಿಕಾರಿಯ ಪುತ್ರ ಸಾವು; ಆತ್ಮಹತ್ಯೆ ಎಂದ ಪೊಲೀಸರು, ಹತ್ಯೆ ಎಂದ ಕುಟುಂಬ

ಭ್ರಷ್ಟಾಚಾರದ ಕೇಸ್ ವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಐಎಎಸ್ ಅಧಿಕಾರಿ ಸಂಜಯ್ ಪೊಪ್ಲಿ ಅವರ 27 ವರ್ಷದ ಪುತ್ರ ತಾನೇ ಬಂದೂಕುನಿಂದ ಗುಂಡು ಹಾರಿಸಿಕೊಂಡು ಶನಿವಾರ ಮೃತಪಟ್ಟಿದ್ದಾನೆ. ಪೊಲೀಸರು ಇದು ಆತ್ಮಹತ್ಯೆ ಎನ್ನುತ್ತಿದ್ದರೆ, ಕುಟುಂಬದವರು ಕೊಲೆ ಎಂದು ಆರೋಪಿಸುತ್ತಿದ್ದಾರೆ.

ಚಂಡೀಗಢ: ಭ್ರಷ್ಟಾಚಾರದ ಕೇಸ್ ವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಐಎಎಸ್ ಅಧಿಕಾರಿ ಸಂಜಯ್ ಪೊಪ್ಲಿ ಅವರ 27 ವರ್ಷದ ಪುತ್ರ ತಾನೇ ಬಂದೂಕುನಿಂದ ಗುಂಡು ಹಾರಿಸಿಕೊಂಡು ಶನಿವಾರ ಮೃತಪಟ್ಟಿದ್ದಾನೆ. ಪೊಲೀಸರು ಇದು ಆತ್ಮಹತ್ಯೆ ಎನ್ನುತ್ತಿದ್ದರೆ, ಕುಟುಂಬದವರು ಕೊಲೆ ಎಂದು ಆರೋಪಿಸುತ್ತಿದ್ದಾರೆ.

ಟೆಂಡರ್ ಕ್ಲಿಯರ್ ಗಾಗಿ ಲಂಚ ಆರೋಪದ ಮೇರೆಗೆ ಐಎಎಸ್ ಅಧಿಕಾರಿ ಸಂಜಯ್ ಪೊಪ್ಲಿ ಅವರ ಪುತ್ರವನ್ನು ಈ ವಾರದ ಆರಂಭದಲ್ಲಿ ಪಂಜಾಬ್ ಜಾಗೃತ ದಳ ಬಂಧಿಸಿತ್ತು. ಎಲ್ಲಾ ಆಯಾಮಗಳಲ್ಲಿ ಪರಿಶೀಲನೆ ನಡೆಸಿದ ಬಳಿಕ ಆತನೇ ಗುಂಡು ಹಾರಿಸಿಕೊಂಡು ಮೃತಪಟ್ಟಿರುವುದು ತಿಳಿದುಬಂದಿದೆ ಎಂದು ಪಂಜಾಬ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಸಿಂಗ್ ಹೇಳಿದ್ದಾರೆ.

ಆತ್ಮಹತ್ಯೆಗೆ ಪರವಾನಗಿ ಇರುವ ಪಿಸ್ತೂಲ್ ಬಳಸಿದ್ದು, ತನಿಖೆ ಮುಂದುವರೆದಿದೆ ಎಂದು ಎಸ್ ಎಸ್ ಪಿ ತಿಳಿಸಿದ್ದಾರೆ. ಆದರೆ, ಇದು ಕೊಲೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಅಧಿಕಾರಿಗಳು ನನ್ನ ಮಗನಿಗೆ ಕಿರುಕುಳ ನೀಡಿದ್ದಾರೆ. ಆತನ ವಿರುದ್ಧ ದಾಖಲಾಗಿರುವ ಕೇಸ್ ಗೆ ಪೂರಕವಾಗಿ ತಪ್ಪು ಹೇಳಿಕೆ ನೀಡುವಂತೆ ಕಿರುಕುಳ ನೀಡಲಾಗಿದೆ. ಆತ ಬ್ರಿಲಿಯಂಟ್ ವಕೀಲನಾಗಿದ್ದ. ಈಗ ನನ್ನ ಮಗನನ್ನು ಕಿತ್ತುಕೊಂಡಿದ್ದಾರೆ ಎಂದು ಸಂಜಯ್ ಪೊಪ್ಲಿ ಅವರ ಪತ್ನಿ ಕಣ್ಣೀರುಡುತ್ತಿದ್ದಾರೆ.

ನನ್ನ ಮಗನನ್ನು ಹತ್ಯೆ ಮಾಡಲಾಗಿದೆ. ನನಗೆ ನ್ಯಾಯ ಬೇಕು, ಕೋರ್ಟ್ ಗೆ ಹೋಗುತ್ತೇನೆ ಎಂದು ಅವರು ಒಂದೇ ಸಮನೆ ಅಳುತ್ತಾ ಸುದ್ದಿಗಾರರಿಗೆ ತಿಳಿಸಿದರು. ಆರೋಪ ಒಪ್ಪಿಕೊಳ್ಳುವಂತೆ ಸಂಜಯ್ ಪೊಪ್ಲಿ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಪೊಪ್ಲಿ ಅವರ ಕುಟುಂಬದ ಗೆಳೆಯರು, ನೆರೆಹೊರೆಯವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT