ಮಾಯಾವತಿ 
ದೇಶ

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಿಎಸ್ ಪಿ ಬೆಂಬಲ

ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಹುಜನ ಸಮಾಜವಾದಿ ಪಕ್ಷ ಬೆಂಬಲ ಘೋಷಿಸಿದೆ. 

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಹುಜನ ಸಮಾಜವಾದಿ ಪಕ್ಷ ಬೆಂಬಲ ಘೋಷಿಸಿದೆ. 

ರಾಷ್ಟ್ರಪತಿ ಚುನಾವಣೆಯಲ್ಲಿ ಗೆದ್ದರೆ ದ್ರೌಪದಿ ಮುರ್ಮು ಭಾರತದ ರಾಷ್ಟ್ರಪತಿ ಹುದ್ದೆಯನ್ನಲಂಕರಿಸಿದ 2ನೇ ಮಹಿಳೆ ಹಾಗೂ ಮೊದಲ ಬುಡಕಟ್ಟು ನಾಯಕಿಯಾಗಿರಲಿದ್ದಾರೆ.
 
ಜುಲೈ.18 ರಂದು ನಡೆಯಲಿರುವ ಚುನಾವಣೆಗೆ ಜೂ.24 ರಂದು ಮುರ್ಮು ನಾಮಪತ್ರ ಸಲ್ಲಿಸಿಕೆ ಮಾಡಿದ್ದು ಪ್ರಧಾನಿ ಮೋದಿ ರಿಟರ್ನಿಂಗ್ ಅಧಿಕಾರಿಗೆ ಕಾಗದ ಪತ್ರಗಳನ್ನು ಹಸ್ತಾಂತರಿಸಿದ್ದರು.

ಆದಿವಾಸಿ ಸಮಾಜ ಬಿಎಸ್ ಪಿ ಪಕ್ಷದ ಅವಿಭಾಜ್ಯ ಅಂಗ ಎಂಬುದನ್ನು ಗಮನದಲ್ಲಿಟ್ಟುಕೊಂಡು ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಪಕ್ಷ ನಿರ್ಧರಿಸಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ತಿಳಿಸಿದ್ದಾರೆ. 

ಈ ನಿರ್ಧಾರ ಬಿಜೆಪಿ ಅಥವಾ ಎನ್ ಡಿಎ ಪರವಾಗಿಯೋ ಅಥವಾ ಯುಪಿಎ ವಿರುದ್ಧವಾಗಿಯೋ ತೆಗೆದುಕೊಂಡಿರುವುದಲ್ಲ. ಬದಲಾಗಿ, ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿಸುವುದಕ್ಕೆ ನಮ್ಮ ಪಕ್ಷ ಹಾಗೂ ಅದರ ಚಳುವಳಿಯನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಂಡಿರುವುದಾಗಿದೆ ಎಂದು ಮಾಯಾವತಿ ತಿಳಿಸಿದ್ದಾರೆ.
 
ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ನಿರ್ಧರಿಸುವಾಗ ವಿಪಕ್ಷಗಳು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಮಾಯಾವತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT