ನವನೀತ್ ಕೌರ್ 
ದೇಶ

ಉದ್ಧವ್ ಠಾಕ್ರೆ ಗೂಂಡಾಗಿರಿ ಕೊನೆಗಾಣಿಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸಂಸದೆ ನವನೀತ್ ರಾಣಾ ಮನವಿ!

ಮಹಾರಾಷ್ಟ್ರದ ಅಮರಾವತಿ ಸಂಸದೆ ನವನೀತ್ ರಾಣಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಗೂಂಡಾಗಿರಿಯನ್ನು ಕೊನೆಗಾಣಿಸುವಂತೆ ಅವರು ಗೃಹ ಸಚಿವರಿಗೆ ಮನವಿ ಮಾಡಿದರು.

ಮುಂಬೈ: ಮಹಾರಾಷ್ಟ್ರದ ಅಮರಾವತಿ ಸಂಸದೆ ನವನೀತ್ ರಾಣಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಗೂಂಡಾಗಿರಿಯನ್ನು ಕೊನೆಗಾಣಿಸುವಂತೆ ಅವರು ಗೃಹ ಸಚಿವರಿಗೆ ಮನವಿ ಮಾಡಿದರು.

ಬಂಡುಕೋರರಲ್ಲಿ ಒಬ್ಬರಾದ ತಾನಾಜಿ ಸಾವಂತ್ ಗೆ ಸೇರಿದ ಪುಣೆಯ ಕಚೇರಿಯನ್ನು ಶಿವಸೇನೆಯ ಕಾರ್ಯಕರ್ತರು ಧ್ವಂಸಗೊಳಿಸಿದರು. ಈ ಹಿನ್ನೆಲೆ ಮಾತನಾಡಿರುವ ನವನೀತ್ ರಾಣಾ ಅವರು, ಶಿವಸೇನೆ ಮತ್ತು ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ವಿರುದ್ಧ ಬಂಡಾಯವೆದ್ದ ಏಕನಾಥ್ ಶಿಂಧೆ ಅವರನ್ನು ಅನುಸರಿಸಿದ ಶಾಸಕರ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೋರಿದ್ದಾರೆ.

ದಾಳಿಯನ್ನು ಸೇನೆಯ ಪುಣೆಯ ಮುಖ್ಯಸ್ಥ ಸಂಜಯ್ ಮೋರೆ ದೃಢಪಡಿಸಿದ್ದು, ನಮ್ಮ ಪಕ್ಷದ ಕಾರ್ಯಕರ್ತರು ತಾನಾಜಿ ಸಾವಂತ್ ಅವರ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ನಮ್ಮ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ತೊಂದರೆ ನೀಡಿದ ಎಲ್ಲಾ ದೇಶದ್ರೋಹಿಗಳು ಮತ್ತು ಬಂಡಾಯ ಶಾಸಕರು ಈ ರೀತಿಯ ಕ್ರಮವನ್ನು ಎದುರಿಸಬೇಕಾಗುತ್ತದೆ. ಕಚೇರಿಯ ಮೇಲೂ ದಾಳಿ ನಡೆಸಲಾಗುವುದು, ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಅವರನ್ನು ತೊರೆದು ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ, ಬಾಳಾಸಾಹೇಬ್ ಅವರ ಸಿದ್ಧಾಂತದ ಪರಿಪಾಲನೆಯಲ್ಲಿರುವ ಶಾಸಕರ ಕುಟುಂಬಗಳಿಗೆ ಅಮಿತ್ ಶಾ ಅವರು ಭದ್ರತೆ ನೀಡಬೇಕು. ಉದ್ಧವ್ ಠಾಕ್ರೆ ಅವರ ಗೂಂಡಾವಾದವನ್ನು ಕೊನೆಗೊಳಿಸಬೇಕು. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕೆಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT