ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 11,739 ಹೊಸ ಕೇಸ್ ಪತ್ತೆ, 25 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 11,739 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 11,739 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,33,89,973ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,999ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 92,576ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 10,917 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,27,72,398ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,53,940 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 86,07,12,079 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,97,08,51,580 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT