ಭಗತ್ ಸಿಂಗ್ ಕೋಶ್ಯಾರಿ 
ದೇಶ

ಅಖಾಡಕ್ಕಿಳಿದ ರಾಜ್ಯಪಾಲ: ಶಿವಸೇನೆ ಬಂಡಾಯ ನಾಯಕರ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ಸೂಚನೆ!

ಶಿವಸೇನೆಯ ಬಂಡಾಯ ಶಾಸಕರಿಗೆ ಭದ್ರತೆ ಒದಗಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ.

ಮುಂಬೈ: ಶಿವಸೇನೆಯ ಬಂಡಾಯ ಶಾಸಕರಿಗೆ ಭದ್ರತೆ ಒದಗಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ.

ಕೆಲವು ರಾಜಕೀಯ ನಾಯಕರು ಬೆದರಿಕೆಯ ಹೇಳಿಕೆಗಳನ್ನು ನೀಡಿದ ನಂತರ ಶಾಸಕರು ತಮ್ಮ ಮನೆ ಮತ್ತು ಕುಟುಂಬಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ರಾಜ್ಯಪಾಲರು, ಉನ್ನತ ಪೊಲೀಸ್ ಅಧಿಕಾರಿ ರಜನೀಶ್ ಸೇಠ್ ಅವರಿಗೆ ಪತ್ರ ಬರೆದಿದ್ದಾರೆ.

ಶಿವಸೇನಾ ಸಚಿವ ಏಕನಾಥ್ ಶಿಂಧೆ ತಮ್ಮದೇ ಪಕ್ಷದ ವಿರುದ್ಧ ಬಂಡಾಯವೆದ್ದು, ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳನ್ನು ಆರಂಭಿಸಿದ ನಂತರ ರಾಜ್ಯವು ದಿನದಿಂದ ದಿನಕ್ಕೆ ಬಿಕ್ಕಟ್ಟಿಗೆ ಸಾಕ್ಷಿಯಾಗುತ್ತಿರುವಂತೆಯೇ ಇದು ಮತ್ತೊಂದು ಬೆಳವಣಿಗೆ.

47 ಶಾಸಕರಲ್ಲಿ  ಶಿವಸೇನೆಯ 38, ಪ್ರಹರ್ ಜನ ಶಕ್ತಿ ಪಕ್ಷದ ಇಬ್ಬರು ಮತ್ತು ಏಳು ಸ್ವತಂತ್ರ ಶಾಸಕರ  ತಮ್ಮ ಕುಟುಂಬಗಳ ಪೊಲೀಸ್ ಭದ್ರತೆಯನ್ನು ಕಾನೂನುಬಾಹಿರವಾಗಿ ಮತ್ತು ಅಕ್ರಮವಾಗಿ ಹಿಂಪಡೆಯಲಾಗಿದೆ ಎಂದು ತನಗೆ ತಿಳಿಸಿದ್ದಾರೆ ಎಂದು ರಾಜ್ಯಪಾಲರಾದ ಕೋಶ್ಯಾರಿ ಹೇಳಿದ್ದಾರೆ.

ಉದ್ಧವ್ ಠಾಕ್ರೆಗೆ ನಿಷ್ಠರಾಗಿರುವ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಲ್ಲಿ ಕೆಲವು ಬಂಡಾಯ ಶಾಸಕರ ಕಚೇರಿಗಳನ್ನು ಧ್ವಂಸಗೊಳಿಸಿದ ಪ್ರತಿಭಟನೆಯ ನಂತರ 15 ಬಂಡಾಯ ಶಿವಸೇನೆ ಶಾಸಕರ ಭದ್ರತೆಯನ್ನು ಹೆಚ್ಚಿಸುವ ಕೇಂದ್ರ ಗೃಹ ಇಲಾಖೆ ನಿರ್ಧಾರವನ್ನು ಅನುಸರಿಸಿ ಪೊಲೀಸ್ ಭದ್ರತೆಯನ್ನು ನೀಡುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.

ಈ ವಾರದ ಆರಂಭದಲ್ಲಿ ಏಕನಾಥ್ ಶಿಂಧೆ ಅವರು ಸ್ವಂತ ಪಕ್ಷದ ವಿರುದ್ಧವೇ ಬಂಡಾಯವೆದ್ದು  ಗುಜರಾತ್‌ನ ಸೂರತ್‌ಗೆ ಮತ್ತು ನಂತರ ಅಸ್ಸಾಂಗೆ ಸ್ಥಳಾಂತರಗೊಂಡಾಗ ಅವರ ಪರ ಹಲವು ಶಿವಸೇನೆ ಶಾಸಕರು ನಿಂತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT