ಸಾಂದರ್ಭಿಕ ಚಿತ್ರ 
ದೇಶ

ಅಗ್ನಿಪಥ್ ನೇಮಕಾತಿ ಯೋಜನೆ: 3 ದಿನಗಳಲ್ಲಿ 56,960 ಅರ್ಜಿಗಳು!

ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯಡಿ ಇಲ್ಲಿಯವರೆಗೆ 56,960 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಭಾರತೀಯ ವಾಯುಪಡೆ (IAF) ತಿಳಿಸಿದೆ. ಯೋಜನೆಯಡಿ ಜುಲೈ 5ರಂದು ನೋಂದಣಿ ಮುಕ್ತಾಯವಾಗುತ್ತದೆ.

ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯಡಿ (Agnipath recruitment scheme) ಇಲ್ಲಿಯವರೆಗೆ 56,960 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಭಾರತೀಯ ವಾಯುಪಡೆ (IAF) ತಿಳಿಸಿದೆ. ಯೋಜನೆಯಡಿ ಜುಲೈ 5ರಂದು ನೋಂದಣಿ ಮುಕ್ತಾಯವಾಗುತ್ತದೆ.

ಕಳೆದ ಜೂನ್ 24, ಶುಕ್ರವಾರದಂದು ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರೆತ ಮೂರು ದಿನಗಳಲ್ಲಿ ಅಗ್ನಿಪಥ್ ನೇಮಕಾತಿ ಯೋಜನೆಯಡಿ 56 ಸಾವಿರದ 960 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ.

ಅಗ್ನಿಪಥ್ ಯೋಜನೆ 2022 ಮೂಲಕ ಭಾರತೀಯ ವಾಯುಪಡೆಯ ನೇಮಕಾತಿಯು ಅಧಿಕೃತ ಅಧಿಸೂಚನೆಯ ಪ್ರಕಾರ ಜೂನ್ 24ರಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ careerindianairforce.cdac.in ಮೂಲಕ ನೇರವಾಗಿ ಅಗ್ನಿಪಥ್ ಯೋಜನೆ 2022 ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅಗ್ನಿಪಥ್ ಯೋಜನೆ 2022ರ ಅಡಿಯಲ್ಲಿ IAF ನೇಮಕಾತಿಗಾಗಿ ನೋಂದಣಿಗಳು ಜುಲೈ 5, 2022 ರಂದು ಕೊನೆಗೊಳ್ಳುತ್ತವೆ. ಅಗ್ನಿವೀರ್ ಆಗಿ ಅರ್ಹತೆ ಪಡೆಯಲು, ಅರ್ಹತಾ ಮಾನದಂಡಗಳನ್ನು ಪೂರೈಸುವುದು ನಿರ್ಣಾಯಕವಾಗಿದೆ. 

ಆಸಕ್ತ ಅಭ್ಯರ್ಥಿಗಳು 10ನೇ ತರಗತಿ ಅಥವಾ ಮೆಟ್ರಿಕ್ಯುಲೇಷನ್ ಉತ್ತೀರ್ಣ ಪ್ರಮಾಣಪತ್ರ, 10+2 ಅಥವಾ ತತ್ಸಮಾನ ಅಂಕಪಟ್ಟಿ ಅಥವಾ 3 ವರ್ಷಗಳ ಎಂಜಿನಿಯರಿಂಗ್ ಡಿಪ್ಲೊಮಾ ಅಂತಿಮ ವರ್ಷದ ಅಂಕಪಟ್ಟಿ ಮತ್ತು ಮೆಟ್ರಿಕ್ಯುಲೇಷನ್ ಅಂಕಪಟ್ಟಿ ಅಥವಾ 2 ವರ್ಷಗಳ ವೃತ್ತಿಪರ ಕೋರ್ಸ್ ಅಂಕಪಟ್ಟಿ ಮತ್ತು ವೃತ್ತಿಯೇತರ ಕೋರ್ಸ್ ಗಳ ಅಂಕಪಟ್ಟಿಗಳನ್ನು ಹೊಂದಿರಬೇಕು.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಸಶಸ್ತ್ರ ಪಡೆಗಳಲ್ಲಿ ಯುವಕರನ್ನು ಸೇರಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿದ್ದರು. ಯುವಕರ ಸೇರ್ಪಡೆಯ ನಂತರ ಅಗ್ನಿವೀರ್ಸ್ ಎಂದು ಕರೆಯಲಾಗುತ್ತದೆ. ಅಗ್ನಿಪಥ್ ಯೋಜನೆಯು ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಅಡಿಯಲ್ಲಿ ಹೊಸ ಮಾನವ ಸಂಪನ್ಮೂಲ ನೇಮಕಾತಿಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT