ಬಂಧಿತ ಉಗ್ರ 
ದೇಶ

ಜಮ್ಮು-ಕಾಶ್ಮೀರ: ಭಯೋತ್ಪಾದಕನ ಬಂಧನ, ಶಸ್ತ್ರಾಸ್ತ್ರಗಳ ವಶ

ಜಮ್ಮು-ಕಾಶ್ಮೀರದ ದೋಡಾ ಪೊಲೀಸರು ಭದ್ರತಾ ಪಡೆಗಳೊಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ  ಕೋಟಿ ದೋಡಾ ನಿವಾಸಿ ಫರೀದ್ ಅಹ್ಮದ್ ಎಂಬ ಭಯೋತ್ಪಾದಕನನ್ನು ಸೋಮವಾರ ನಸುಕಿನ ಜಾವ ಬಂಧಿಸಿದ್ದಾರೆ. ಆತನ ಬಳಿಯಿಂದ ಒಂದು ಚೈನೀಸ್ ಪಿಸ್ತೂಲ್, ಎರಡು ಬಂದೂಕುಗಳು, 14 ಕಾಟ್ರೀಜ್ ಗಳು ಮತ್ತು ಒಂದು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. 

ಶ್ರೀನಗರ: ಜಮ್ಮು-ಕಾಶ್ಮೀರದ ದೋಡಾ ಪೊಲೀಸರು ಭದ್ರತಾ ಪಡೆಗಳೊಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ  ಕೋಟಿ ದೋಡಾ ನಿವಾಸಿ ಫರೀದ್ ಅಹ್ಮದ್ ಎಂಬ ಭಯೋತ್ಪಾದಕನನ್ನು ಸೋಮವಾರ ನಸುಕಿನ ಜಾವ ಬಂಧಿಸಿದ್ದಾರೆ. ಆತನ ಬಳಿಯಿಂದ ಒಂದು ಚೈನೀಸ್ ಪಿಸ್ತೂಲ್, ಎರಡು ಬಂದೂಕುಗಳು, 14 ಕಾಟ್ರೀಜ್ ಗಳು ಮತ್ತು ಒಂದು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. 

ಜಮ್ಮು-ಕಾಶ್ಮೀರದಲ್ಲಿ ಅಮರನಾಥ ಯಾತ್ರೆಗೆ ಮುನ್ನ ಹೆಚ್ಚಿನ ಭದ್ರತಾ ಕ್ರಮವಾಗಿ, ಪೊಲೀಸರು ಠಾಣೆ ದೋಡಾದ ಪಟ್ಟಣದ ಹೊರವಲಯದಲ್ಲಿ ತಡೆಯನ್ನು ಹಾಕಿದ್ದರು. ಈ ಸಂದರ್ಭದಲ್ಲಿ ಪ್ರದೇಶದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊತ್ತಿದ್ದ ಯುವಕನನ್ನು ತಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ವಿಶೇಷ ತಂಡವು ತನಿಖೆಯನ್ನು ಪ್ರಾರಂಭಿಸಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಫರೀದ್ ಅಹ್ಮದ್ ಶಂಕಿತನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಡೆದು ದೋಡಾದಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಿದ್ದ ಎಂದು ತಿಳಿದುಬಂದಿದೆ. ಸಮಯೋಚಿತ ಮತ್ತು ಕ್ಷಿಪ್ರ ಕ್ರಮದಿಂದಾಗಿ ಈ ದುಷ್ಕೃತ್ಯವನ್ನು ವಿಫಲಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 world cup: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಬೆಥೆಲ್ ಶತಕ ವ್ಯರ್ಥ; ಆಂಗ್ಲರ ಮಣಿಸಿದ ಭಾರತ ಫೈನಲ್ಸ್ ಗೆ ಲಗ್ಗೆ

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

GSDPಯಲ್ಲಿ ಕರ್ನಾಟಕವನ್ನೂ ಮೀರಿಸಿದ ಉತ್ತರ ಪ್ರದೇಶ: ದೇಶದ ಅತಿ ದೊಡ್ಡ ಆರ್ಥಿಕತೆ ಇರುವ ರಾಜ್ಯ ಯಾವುದು?

T20 World Cup 2026 ಸೆಮಿಫೈನಲ್: ಸ್ಯಾಮ್ಸನ್ ಮಿಂಚಿನ ಅರ್ಧಶತಕ; ಇಂಗ್ಲೆಂಡ್ ಗೆ ಬೃಹತ್ 254 ರನ್ ಟಾರ್ಗೆಟ್ ನೀಡಿದ ಭಾರತ!

ಮಧ್ಯಪ್ರಾಚ್ಯ ಸಂಘರ್ಷ: ಅಚ್ಚರಿ ಮೂಡಿಸಿದ ಜೈಶಂಕರ್- ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ

SCROLL FOR NEXT