ಬಂಧಿತ ಉಗ್ರ 
ದೇಶ

ಜಮ್ಮು-ಕಾಶ್ಮೀರ: ಭಯೋತ್ಪಾದಕನ ಬಂಧನ, ಶಸ್ತ್ರಾಸ್ತ್ರಗಳ ವಶ

ಜಮ್ಮು-ಕಾಶ್ಮೀರದ ದೋಡಾ ಪೊಲೀಸರು ಭದ್ರತಾ ಪಡೆಗಳೊಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ  ಕೋಟಿ ದೋಡಾ ನಿವಾಸಿ ಫರೀದ್ ಅಹ್ಮದ್ ಎಂಬ ಭಯೋತ್ಪಾದಕನನ್ನು ಸೋಮವಾರ ನಸುಕಿನ ಜಾವ ಬಂಧಿಸಿದ್ದಾರೆ. ಆತನ ಬಳಿಯಿಂದ ಒಂದು ಚೈನೀಸ್ ಪಿಸ್ತೂಲ್, ಎರಡು ಬಂದೂಕುಗಳು, 14 ಕಾಟ್ರೀಜ್ ಗಳು ಮತ್ತು ಒಂದು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. 

ಶ್ರೀನಗರ: ಜಮ್ಮು-ಕಾಶ್ಮೀರದ ದೋಡಾ ಪೊಲೀಸರು ಭದ್ರತಾ ಪಡೆಗಳೊಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ  ಕೋಟಿ ದೋಡಾ ನಿವಾಸಿ ಫರೀದ್ ಅಹ್ಮದ್ ಎಂಬ ಭಯೋತ್ಪಾದಕನನ್ನು ಸೋಮವಾರ ನಸುಕಿನ ಜಾವ ಬಂಧಿಸಿದ್ದಾರೆ. ಆತನ ಬಳಿಯಿಂದ ಒಂದು ಚೈನೀಸ್ ಪಿಸ್ತೂಲ್, ಎರಡು ಬಂದೂಕುಗಳು, 14 ಕಾಟ್ರೀಜ್ ಗಳು ಮತ್ತು ಒಂದು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. 

ಜಮ್ಮು-ಕಾಶ್ಮೀರದಲ್ಲಿ ಅಮರನಾಥ ಯಾತ್ರೆಗೆ ಮುನ್ನ ಹೆಚ್ಚಿನ ಭದ್ರತಾ ಕ್ರಮವಾಗಿ, ಪೊಲೀಸರು ಠಾಣೆ ದೋಡಾದ ಪಟ್ಟಣದ ಹೊರವಲಯದಲ್ಲಿ ತಡೆಯನ್ನು ಹಾಕಿದ್ದರು. ಈ ಸಂದರ್ಭದಲ್ಲಿ ಪ್ರದೇಶದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊತ್ತಿದ್ದ ಯುವಕನನ್ನು ತಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ವಿಶೇಷ ತಂಡವು ತನಿಖೆಯನ್ನು ಪ್ರಾರಂಭಿಸಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಫರೀದ್ ಅಹ್ಮದ್ ಶಂಕಿತನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಡೆದು ದೋಡಾದಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಿದ್ದ ಎಂದು ತಿಳಿದುಬಂದಿದೆ. ಸಮಯೋಚಿತ ಮತ್ತು ಕ್ಷಿಪ್ರ ಕ್ರಮದಿಂದಾಗಿ ಈ ದುಷ್ಕೃತ್ಯವನ್ನು ವಿಫಲಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT