ಜಂತರ್ ಮಂತರ್ ನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು 
ದೇಶ

ನವದೆಹಲಿ: ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ, ಕಾಂಗ್ರೆಸ್ ಮುಖಂಡರು ಭಾಗಿ

ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ  ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದರು.

ನವದೆಹಲಿ: ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ  ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದರು.

ಸೆಟಲ್ವಡ್ ಅವರ ಬಂಧನ ಇತರ ಸಾಮಾಜಿಕ ಹೋರಾಟಗಾರರ ಧ್ವನಿಯನ್ನು ಅಡಗಿಸುವ ಪ್ರಯತ್ನ, ಪೂರ್ವ ಯೋಜಿತ ಸಂಚು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಾಂಗ್ರೆಸ್ ಹಿರಿಯ ಮುಖಂಡರಾದ ಜೈರಾಮ್ ರಮೇಶ್ ಹಾಗೂ ಅಜಯ್ ಮಾಕೆನ್ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಜಂಥರ್ ಮಂತರ್ ನಲ್ಲಿ ಜಮಾಯಿಸಿದ್ದ ಸುಮಾರು 300ಕ್ಕೂ ಹೆಚ್ಚು ಪ್ರತಿಭಟನಾಕಾರರು ಸೆಟಲ್ವಡ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಆರ್. ಬಿ. ಶ್ರೀಕುಮಾರ್, ಸಂಜೀವ್ ಭಟ್ ಅವರ ಬಿಡುಗಡೆಗೆ ಒತ್ತಾಯಿಸಿ ಘೋಷಣೆ ಕೂಗಿದರು. ಕಾಂಗ್ರೆಸ್ ಪಕ್ಷ ಈ ಮೂವರನ್ನು ಬೆಂಬಲಿಸಲಿದ್ದು, ಆದಷ್ಟು ಬೇಗ ಬಿಡುಗಡೆ ಮಾಡಬೇಕೆಂದು ಅಜಯ್ ಮಾಕನ್ ಹೇಳಿದರು.

ಕೇಂದ್ರ ಸರ್ಕಾರ ದೇಶದಲ್ಲಿನ ಇತರ ಸಾಮಾಜಿಕ ಹೋರಾಟಗಾರರ ಧ್ವನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದೆ. ಸೆಟಲ್ವಡ್ ಅವರ ಬಂಧನ ಪೂರ್ವ ಯೋಜಿತ ಸಂಚು ಆಗಿದ್ದು, ಇದನ್ನು ನಾವು ಖಂಡಿಸುತ್ತೇವೆ ಎಂದು ಸಾಮಾಜಿಕ ಹೋರಾಟಗಾರ್ತಿ ಶಬ್ಮಾಮ್ ಹಸ್ಮಿ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT