ಏಕನಾಥ್ ಶಿಂಧೆ 
ದೇಶ

ರಾಜ್ ಠಾಕ್ರೆ ಜೊತೆ ಏಕನಾಥ್ ಶಿಂಧೆ ಎರಡು ಬಾರಿ ಮಾತುಕತೆ: ಹೆಚ್ಚಿದ ಕುತೂಹಲ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ದಿನಕಳೆಯುತ್ತಿದ್ದಂತೆಯೇ ಕುತೂಹಲ ಹೆಚ್ಚಾಗುವಂತೆ ಮಾಡಿದ್ದು, ಈ ನಡುವಲ್ಲೇ ಶಿವಸೇನೆ ನಾಯಕ ಏಕನಾಥ್ ಶಿಂದೆ ಅವರು, ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರೊಂದಿಗೆ...

ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ದಿನಕಳೆಯುತ್ತಿದ್ದಂತೆಯೇ ಕುತೂಹಲ ಹೆಚ್ಚಾಗುವಂತೆ ಮಾಡಿದ್ದು, ಈ ನಡುವಲ್ಲೇ ಶಿವಸೇನೆ ನಾಯಕ ಏಕನಾಥ್ ಶಿಂದೆ ಅವರು, ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರೊಂದಿಗೆ ಎರಡು ಬಾರಿ ದೂರವಾಣಿಯಲ್ಲಿ ಮಾತನಾಡಿದ್ದಾರೆಂದು ಹೇಳಲಾಗುತ್ತಿದೆ. ಈ ಬೆಳವಣಿಗೆಯು ಸಾಕಷ್ಟು ಕುತೂಹಲವನ್ನುಂಟು ಮಾಡಿದೆ. 

ಮಹಾರಾಷ್ಟ್ರದ ಇತ್ತೀಚಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಶಿಂದೆ ಅವರು, ಠಾಕ್ರೆ ಅವರೊಂದಿಗೆ ಮಾತನಾಡಿದ್ದು, ಇದೇ ವೇಳೆ, ಅವರ ಆರೋಗ್ಯದ ಬಗ್ಗೆಯೂ ವಿಚಾರಿಸಿದ್ದಾರೆ ಎಂದು ಎಂಎನ್‌ಎಸ್ ನಾಯಕರೊಬ್ಬರು ಎಎನ್ಐ ಸುದ್ದಿಸಂಸ್ಥೆಗೆ ಹೇಳಿಕೆ ನೀಡಿದ್ದಾರೆ. 

ಈ ನಡುವೆ ಬಂಡಾಯವೆದ್ದಿರುವ ನಾಯಕರ ವಿರುದ್ಧ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ. 

ಮೂರು ಪಕ್ಷಗಳು ಬಂಡಾಯ ಶಾಸಕರನ್ನು ಅನರ್ಹತೆ ಮಾಡುವುದು ಮತ್ತು ಪಕ್ಷದಿಂದ ಅಮಾನತು ಮಾಡಲು ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT