ಸಂಜಯ್ ರಾವತ್ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್'ಗೆ ಇಡಿ ಸಮನ್ಸ್

ಅಕ್ರಮ ಹಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಸೇನೆ ನಾಯಕ ಸಂಜಯ್ ರಾವತ್ ಅವರಿಗೆ ಸೋಮವಾರ ಸಮನ್ಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

ಮುಂಬೈ; ಅಕ್ರಮ ಹಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಸೇನೆ ನಾಯಕ ಸಂಜಯ್ ರಾವತ್ ಅವರಿಗೆ ಸೋಮವಾರ ಸಮನ್ಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.
 
ಮುಂಬೈನ ಕೋರೇಂಗಾವ್​ನಲ್ಲಿರುವ ಪತ್ರಾ ಬಡಾವಣೆ ಅಭಿವೃದ್ಧಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾವತ್​ಗೆ ಸಮನ್ಸ್​ ಜಾರಿ ಮಾಡಿರುವ ಇಡಿ, ನಾಳೆ (ಮಂಗಳವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

47 ಎಕರೆ ಜಾಗಕ್ಕೆ ಸಂಬಂಧಿಸಿದಂತೆ ಉದ್ಯಮಿ ಪ್ರವೀಣ್​ ಜತೆ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಸಂಜಯ್​ ರಾವತ್​ ಮೇಲಿದ್ದು, 1,034 ಕೋಟಿ ರೂ. ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಅತ್ತ ಮಹಾ ಆಘಾಡಿ ಸರ್ಕಾರಕ್ಕೆ ರೆಬಲ್​ ಶಾಸಕರು ಬೆಂಬಲ ಹಿಂಪಡೆದಿದ್ದು, ಉದ್ಧವ್​ ಠಾಕ್ರೆ ಸರ್ಕಾರ ಕುಸಿದು ಬೀಳುವ ಸಾಧ್ಯತೆಗಳಿವೆ. ಸಂಜಯ್​ ರಾವತ್​ ಅವರ ನಡವಳಿಕೆಯೇ ಮಹಾರಾಷ್ಟ್ರ ಸರ್ಕಾರ ಪತನಕ್ಕೆ ಕಾರಣ ಎಂದು ಕೆಲ ಬಂಡಾಯ ಶಾಸಕರು ಹೇಳಿದ್ದು, ಈ ನಡುವಲ್ಲೇ ಇಡಿ ಸಮನ್ಸ್​ ಜಾರಿ ಮಾಡಿರುವುದು ರಾವತ್​ ಅವರ ಸಂಕಷ್ಟವನ್ನು ಮತ್ತಷ್ಟು ಹೆಚ್ಚು ಮಾಡಿದೆ. 

ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾವತ್ ಅವರು, ಕೇಂದ್ರೀಯ ಸಂಸ್ಥೆ ಸಮನ್ಸ್ ಜಾರಿ ಮಾಡಿರುವುದಕ್ಕೆ ನನಗೇನು ಭಯವಿಲ್ಲ. ನಾನೊಬ್ಬ ನಿಜವಾದ ಶಿವ ಸೈನಿಕ, ಯಾವುದೇ ಸಂಕಷ್ಟ ಬರಲಿ ನನ್ನ ಹೋರಾಟವನ್ನು ಮುಂದುವರೆಸುತ್ತೇನೆಂದು ಹೇಳಿದ್ದಾರೆ. 

ಅಧಿಕಾರಿಗಳು ನನ್ನ ಆಸ್ತಿಯನ್ನು ಜಪ್ತಿ ಮಾಡಲಿ, ನನ್ನ ಮೇಲೆ ಗುಂಡು ಹಾರಿಸಲಿ, ಜೈಲಿಗಟ್ಟಲಿ. ನಾನು ಬಾಳಾಸಾಹೇಬ್ ಠಾಕ್ರೆ ಅನುಯಾಯಿ. ನಿಜವಾದ ಶಿವ ಸೈನಿಕ. ಹೋರಾಟ ಮಾಡಿ, ಸತ್ಯ ಬಹಿರಂಗಪಡಿಸುತ್ತೇನೆ. ಇಷ್ಟಕ್ಕೆ ನಾನು ಸುಮ್ಮನಾಗುವುದಿಲ್ಲ. ಸತ್ಯ ಶೀಘ್ರದಲ್ಲೇ ಬಹಿರಂಗಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT