ಸಂಜಯ್ ರಾವುತ್ 
ದೇಶ

ಗುವಾಹಟಿ ದಾರಿ ಹಿಡಿಯುವುದಿಲ್ಲ: ಇ.ಡಿ ಸಮನ್ಸ್ ಗೆ ಸಂಜಯ್ ರಾವುತ್ ಹೀಗೇಕೆ ಹೇಳಿದ್ದು ಅಂದರೆ...

ಶಿವಸೇನೆ ಸಂಸದ ಸಂಜಯ್ ರಾವುತ್ ತಮಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದು, ತಾವು ಗುವಾಹಟಿ ಮಾರ್ಗ ಹಿಡಿಯುವುದಿಲ್ಲ ಎಂದು ಹೇಳಿದ್ದಾರೆ. 

ಮುಂಬೈ: ಶಿವಸೇನೆ ಸಂಸದ ಸಂಜಯ್ ರಾವುತ್ ತಮಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದು, ತಾವು ಗುವಾಹಟಿ ಮಾರ್ಗ ಹಿಡಿಯುವುದಿಲ್ಲ ಎಂದು ಹೇಳಿದ್ದಾರೆ. 

ಗುವಾಹಟಿಯಲ್ಲಿ ಶಿವಸೇನೆಯ ಬಂಡಾಯ ಶಾಸಕರು ವಾಸ್ತವ್ಯ ಹೂಡಿದ್ದು, ರಾವುತ್ ಗೆ ಬೆದರಿಕೆ ಹಾಕುವ ಯತ್ನದಲ್ಲಿ ಜಾರಿ ನಿರ್ದೇಶನಾಲಯದ ಸಮನ್ಸ್ ಜಾರಿಗೊಳಿಸಿದೆ ಎಂದು ರಾವುತ್ ಅವರ ಸಹೋದರ ಸುನಿಲ್ ಹೇಳಿದ್ದಾರೆ.
 
ಜಾರಿ ನಿರ್ದೇಶನಾಲಯ ನನಗೆ ಸಮನ್ಸ್ ಜಾರಿಗೊಳಿಸಿದೆ ಎಂಬುದನ್ನು ಈಗಷ್ಟೇ ತಿಳಿದುಕೊಂಡೆ. ಮಹಾರಾಷ್ಟ್ರದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನಾವೆಲ್ಲಾ ಬಾಳಾಸಾಹೇಬರ ಶಿವಸೈನಿಕರು. ಜಾರಿ ನಿರ್ದೇಶನಾಲಯದ ಸಮನ್ಸ್ ಷಡ್ಯಂತ್ರವಾಗಿದ್ದು, ನನ್ನ ಶಿರಚ್ಛೇದ ಮಾಡಿದರೂ ನಾನು ಗುವಾಹಟಿ ಮಾರ್ಗ ಹಿಡಿಯುವುದಿಲ್ಲ ಎಂದು ರಾವುತ್ ಟ್ವೀಟ್ ನಲ್ಲಿ ತಿಳಿಸಿದ್ದು ದೇವೇಂದ್ರ ಫಡ್ನವಿಸ್ ಅವರನ್ನು ಟ್ಯಾಗ್ ಮಾಡಿದ್ದಾರೆ. 

ತಮ್ಮನ್ನು ಬಂಧಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸಂಜಯ್ ರಾವುತ್ ಸವಾಲು ಹಾಕಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT