ಸಂಜಯ್ ರಾವುತ್ 
ದೇಶ

ಗುವಾಹಟಿ ದಾರಿ ಹಿಡಿಯುವುದಿಲ್ಲ: ಇ.ಡಿ ಸಮನ್ಸ್ ಗೆ ಸಂಜಯ್ ರಾವುತ್ ಹೀಗೇಕೆ ಹೇಳಿದ್ದು ಅಂದರೆ...

ಶಿವಸೇನೆ ಸಂಸದ ಸಂಜಯ್ ರಾವುತ್ ತಮಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದು, ತಾವು ಗುವಾಹಟಿ ಮಾರ್ಗ ಹಿಡಿಯುವುದಿಲ್ಲ ಎಂದು ಹೇಳಿದ್ದಾರೆ. 

ಮುಂಬೈ: ಶಿವಸೇನೆ ಸಂಸದ ಸಂಜಯ್ ರಾವುತ್ ತಮಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದು, ತಾವು ಗುವಾಹಟಿ ಮಾರ್ಗ ಹಿಡಿಯುವುದಿಲ್ಲ ಎಂದು ಹೇಳಿದ್ದಾರೆ. 

ಗುವಾಹಟಿಯಲ್ಲಿ ಶಿವಸೇನೆಯ ಬಂಡಾಯ ಶಾಸಕರು ವಾಸ್ತವ್ಯ ಹೂಡಿದ್ದು, ರಾವುತ್ ಗೆ ಬೆದರಿಕೆ ಹಾಕುವ ಯತ್ನದಲ್ಲಿ ಜಾರಿ ನಿರ್ದೇಶನಾಲಯದ ಸಮನ್ಸ್ ಜಾರಿಗೊಳಿಸಿದೆ ಎಂದು ರಾವುತ್ ಅವರ ಸಹೋದರ ಸುನಿಲ್ ಹೇಳಿದ್ದಾರೆ.
 
ಜಾರಿ ನಿರ್ದೇಶನಾಲಯ ನನಗೆ ಸಮನ್ಸ್ ಜಾರಿಗೊಳಿಸಿದೆ ಎಂಬುದನ್ನು ಈಗಷ್ಟೇ ತಿಳಿದುಕೊಂಡೆ. ಮಹಾರಾಷ್ಟ್ರದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನಾವೆಲ್ಲಾ ಬಾಳಾಸಾಹೇಬರ ಶಿವಸೈನಿಕರು. ಜಾರಿ ನಿರ್ದೇಶನಾಲಯದ ಸಮನ್ಸ್ ಷಡ್ಯಂತ್ರವಾಗಿದ್ದು, ನನ್ನ ಶಿರಚ್ಛೇದ ಮಾಡಿದರೂ ನಾನು ಗುವಾಹಟಿ ಮಾರ್ಗ ಹಿಡಿಯುವುದಿಲ್ಲ ಎಂದು ರಾವುತ್ ಟ್ವೀಟ್ ನಲ್ಲಿ ತಿಳಿಸಿದ್ದು ದೇವೇಂದ್ರ ಫಡ್ನವಿಸ್ ಅವರನ್ನು ಟ್ಯಾಗ್ ಮಾಡಿದ್ದಾರೆ. 

ತಮ್ಮನ್ನು ಬಂಧಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸಂಜಯ್ ರಾವುತ್ ಸವಾಲು ಹಾಕಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT