ಸಂಜಯ್ ರಾವತ್ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜುಲೈ 1ಕ್ಕೆ ವಿಚಾರಣೆಗೆ ಹಾಜರಾಗಲು ಸಂಜಯ್ ರಾವತ್ ಗೆ ಇಡಿ ಮತ್ತೆ ಸಮನ್ಸ್

ಜುಲೈ 1 ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ ಹೊಸದಾಗಿ ಸಮನ್ಸ್ ನೀಡಿದೆ.

ಮುಂಬೈ: ಜುಲೈ 1 ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ ಹೊಸದಾಗಿ ಸಮನ್ಸ್ ನೀಡಿದೆ.

ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಡಿ ಮುಂದೆ ವಿಚಾರಣೆಗೆ ಹಾಜರಾಗಲು ಸಂಜಯ್ ರಾವತ್ ಮಂಗಳವಾರ ಹೆಚ್ಚಿನ ಸಮಯಾವಕಾಶ ಕೋರಿದ್ದು, ತನಿಖಾ ಸಂಸ್ಥೆ ಕೂಡಾ ಅದೇ ಅವಕಾಶವನ್ನು ನೀಡಿದೆ ಎಂದು ಸಂಜಯ್ ರಾವತ್ ಪರ ವಕೀಲರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಸುಮಾರು 11-15ರ ಸುಮಾರಿಗೆ ಇಡಿ ಕಚೇರಿ ತಲುಪಿದ ವಕೀಲರು, ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೋರಿಕೆಗೆ ಸಂಬಂಧಿಸಿದ ಪತ್ರಗಳನ್ನು ತನಿಖಾ ಅಧಿಕಾರಿಗಳಿಗೆ ಸಲ್ಲಿಸಿದರು.

ಸೋಮವಾರ ಮಧ್ಯಾಹ್ನ ತಡವಾಗಿ ಇಡಿ ಸಮನ್ಸ್ ನೀಡಿದೆ. ಇಡಿ ಕೆಲವು ದಾಖಲೆಗಳನ್ನು ಕೋರಿರುವುದರಿಂದ ನಾವು ಸಮಯ ಕೋರಿ ಅರ್ಜಿ ಸಲ್ಲಿಸಿದ್ದೇವೆ ಎಂದು ವಕೀಲರು ಹೇಳಿದರು. ಅವರು 14 ದಿನಗಳ ಕಾಲಾವಕಾಶವನ್ನು ಬಯಸಿದರು. ಅಷ್ಟು ಕಡಿಮೆ ಅವಧಿಯಲ್ಲಿ ಆ ದಾಖಲೆಗಳನ್ನು ಸಂಗ್ರಹಿಸಲು ಸಾಧ್ಯವಿಲ್ಲ, ಇದರಿಂದಾಗಿ ನಾವು ಇಡಿಯಿಂದ ಸಮಯ ಕೇಳಿದ್ದೇವೆ ಮತ್ತು ಅದಕ್ಕೆ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT