ಸಂಜಯ್ ರಾವತ್ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜುಲೈ 1ಕ್ಕೆ ವಿಚಾರಣೆಗೆ ಹಾಜರಾಗಲು ಸಂಜಯ್ ರಾವತ್ ಗೆ ಇಡಿ ಮತ್ತೆ ಸಮನ್ಸ್

ಜುಲೈ 1 ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ ಹೊಸದಾಗಿ ಸಮನ್ಸ್ ನೀಡಿದೆ.

ಮುಂಬೈ: ಜುಲೈ 1 ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ ಹೊಸದಾಗಿ ಸಮನ್ಸ್ ನೀಡಿದೆ.

ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಡಿ ಮುಂದೆ ವಿಚಾರಣೆಗೆ ಹಾಜರಾಗಲು ಸಂಜಯ್ ರಾವತ್ ಮಂಗಳವಾರ ಹೆಚ್ಚಿನ ಸಮಯಾವಕಾಶ ಕೋರಿದ್ದು, ತನಿಖಾ ಸಂಸ್ಥೆ ಕೂಡಾ ಅದೇ ಅವಕಾಶವನ್ನು ನೀಡಿದೆ ಎಂದು ಸಂಜಯ್ ರಾವತ್ ಪರ ವಕೀಲರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಸುಮಾರು 11-15ರ ಸುಮಾರಿಗೆ ಇಡಿ ಕಚೇರಿ ತಲುಪಿದ ವಕೀಲರು, ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೋರಿಕೆಗೆ ಸಂಬಂಧಿಸಿದ ಪತ್ರಗಳನ್ನು ತನಿಖಾ ಅಧಿಕಾರಿಗಳಿಗೆ ಸಲ್ಲಿಸಿದರು.

ಸೋಮವಾರ ಮಧ್ಯಾಹ್ನ ತಡವಾಗಿ ಇಡಿ ಸಮನ್ಸ್ ನೀಡಿದೆ. ಇಡಿ ಕೆಲವು ದಾಖಲೆಗಳನ್ನು ಕೋರಿರುವುದರಿಂದ ನಾವು ಸಮಯ ಕೋರಿ ಅರ್ಜಿ ಸಲ್ಲಿಸಿದ್ದೇವೆ ಎಂದು ವಕೀಲರು ಹೇಳಿದರು. ಅವರು 14 ದಿನಗಳ ಕಾಲಾವಕಾಶವನ್ನು ಬಯಸಿದರು. ಅಷ್ಟು ಕಡಿಮೆ ಅವಧಿಯಲ್ಲಿ ಆ ದಾಖಲೆಗಳನ್ನು ಸಂಗ್ರಹಿಸಲು ಸಾಧ್ಯವಿಲ್ಲ, ಇದರಿಂದಾಗಿ ನಾವು ಇಡಿಯಿಂದ ಸಮಯ ಕೇಳಿದ್ದೇವೆ ಮತ್ತು ಅದಕ್ಕೆ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!